ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರ ಶರಣಪ್ಪ ಸುರಗುಂಟಿ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ಪರೀಶೀಲನೆ
A team of officials led by Sharanappa Suragunti, Chief Engineer of the Public Works Department, vis
ಕಂಪ್ಲಿ 13: ಕಂಪ್ಲಿ-ಕೋಟೆಯ ಪ್ರದೇಶದ ತುಂಗಭದ್ರ ನದಿಯ ಶಿಥಿಲಗೊಂಡ ಸೇತುವೆ ಸ್ಥಳಕ್ಕೆ ಕಲಬುರ್ಗಿ ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರ ಶರಣಪ್ಪ ಸುರಗುಂಟಿ ನೇತೃತ್ವದ ಅಧಿಕಾರಿಗಳ ತಂಡ ಗುರುವಾರ ಭೇಟಿ ನೀಡಿ ಪರೀಶೀಲಿಸಿದರು. ನಂತರ ಶರಣಪ್ಪ ಸುರಗುಂಟಿ ಅವರು ಪತ್ರಕರ್ತರೊಂದಿಗೆ ಮಾತನಾಡಿ, ಸೇತುವೆ ಕಂಪ್ಲಿ-ಗಂಗಾವತಿ ಸಂಪರ್ಕದ ಕೊಂಡಿಯಾಗಿದೆ. ಕಂಪ್ಲಿ ಸೇತುವೆ ಹಳೆದಾಗಿರುವ ಜೊತೆಗೆ ಶಿಥಿಲದ ವ್ಯವಸ್ಥೆಯಲ್ಲಿರುವುದರಿಂದ ಹೊಸ ಸೇತುವೆಗೆ ಹೆಚ್ಚಿನ ಬೇಡಿಕೆ ವ್ಯಕ್ತವಾದ ಹಿನ್ನಲೆ ಮಾನ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ, ಸ್ಥಳೀಯ ಶಾಸಕ ಜೆ.ಎನ್.ಗಣೇಶ ಅವರು ಈಗಾಗಲೇ ಪರೀಶೀಲನೆ ಮಾಡಿದ್ದು, ಸರ್ಕಾರದ ಮಟ್ಟದಲ್ಲಿ ಪ್ರಾಸ್ತಾಪಿಸಿ, ಹೊಸ ಸೇತುವೆಯ ಸಂಬಂಧ ಸರ್ಕಾರದ ನಿರ್ದೇಶನಂತೆ ಕಂಪ್ಲಿ ಸೇತುವೆಗೆ ಖುದ್ದಾಗಿ ಭೇಟಿ ನೀಡಿ ಪರೀಶೀಲಿಸಲಾಗಿದೆ. ಇಲ್ಲಿನ ಸೇತುವೆಯೂ ನದಿ ಪ್ರವಾಹದಿಂದ ಶಿಥಿಲಗೊಂಡು, ಸಂಚಾರಕ್ಕೆ ಬಹಳಷ್ಟು ಅಡೆತಡೆಯನ್ನುಂಟು ಮಾಡುತ್ತಿದೆ. ಇದರಿಂದ ಹೊಸ ಸೇತುವೆಯ ಅಗತ್ಯತೆ ಇರುವದರಿಂದ ಹೊಸ ಸೇತುವೆ ನಿರ್ಮಾಣಕ್ಕಾಗಿ ಸೂಕ್ತ ಸ್ಥಳವನ್ನು ಸೂಚಿಸಬೇಕಾಗಿದೆ. ಆದ್ದರಿಂದ ಸ್ಥಳ ಪರೀಶೀಲಿಸಿದ್ದು, ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು. ಈ ಬಾರಿ ಕಂಪ್ಲಿ ಹೊಸ ಸೇತುವೆ ನಿರ್ಮಾಣವಾಗುವ ಭರವಸೆ ಮೂಡುವಂತಾಗಿದೆ ಎಂದರು. ಈ ಸಂದರ್ಭದಲ್ಲಿ ಬಳ್ಳಾರಿ ಲೋಕೋಪಯೋಗಿ ಇಲಾಖೆಯ ಅಧಿಕ್ಷಕ ಅಭಿಯಂತರ ತಿಮ್ಮರಾಯಪ್ಪ, ಇಇಗಳಾದ ಹೇಮ್ರಾಜ್, ಹೇಮಂತರಾಜ್, ಎಇ ಬಸವರೆಡ್ಡಿ, ವಿಶ್ವನಾಥ, ಜೆಇ ಆನಂದ ಸೇರಿದಂತೆ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 