ರೈತರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ರೈತರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ABVP protests demanding appropriate compensation for farmers


ಬಳ್ಳಾರಿ 06: ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಗದ ಕಾರಣ ರೈತರು ಇಂದು ಸಂಕಷ್ಟಗಳನ್ನು ಅನುಭವಿಸುತ್ತಿದ್ದಾರೆ, ರೈತರು ತಮ್ಮ ಬೆಳೆಗಳನ್ನ ಬೆಳೆಯಲು ಉಪಯೋಗಿಸುವ ರಸಗೊಬ್ಬರ, ಹಾಗೂ ಇನ್ನಿತರ ವಸ್ತುಗಳ ಬೆಲೆ ಹೆಚ್ಚಾಗಿರುವುದು ನಮಗೆಲ್ಲ ತಿಳಿದಿರುವ ಸಂಗತಿ, ಹೀಗೆ ಖರ್ಚು ಮಾಡಿ ಒಂದು ವರ್ಷಗಳ ಕಾಲ ಕಷ್ಟ ಪಟ್ಟು ಬೆಳೆದ ಬೆಳೆಗಳಿಗೆ ಸರಿಯಾದ ರೀತಿಯ ಬೆಲೆ ಸಿಗದೇ ಇರುವ ಕಾರಣ ಹಲವಾರು ತೊಂದರೆಗಳನ್ನು ಅನುಭವಿಸುವಂತಾಗಿದೆ, ಹಿಂದಿನ ಸರಕಾರ ರೈತರ ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಜಾರಿಗೆ ಮಾಡಿದ್ದ ರೈತ ವಿದ್ಯಾ ನಿಧಿಯನ್ನು ಸಹಿತ ಇಂದಿನ ಸರಕಾರ ಸ್ಥಗಿತ ಮಾಡಿದ್ದು ರೈತರ ಮಕ್ಕಳಿಗೆ ಮಾಡಿದ ಅನ್ಯಾಯವಾಗಿದೆ. 

ಈ ಕೂಡಲೇ ಪ್ರತಿಭಟನೆ ನಿರತರೈತರ ಬೇಡಿಕೆಗಳನ್ನು ಆಲಿಸಿ ಅವುಗಳನ್ನು ಕಾಲಮಿತಿ ಒಳಗೆ ಪೂರೈಸಬೇಕು. ಮೊದಲೇ ಮಳೆ, ನೆರೆಯಿಂದ ತಮ್ಮ ಕೃಷಿ ಉತ್ಪನ್ನಗಳನ್ನು ಕಳೆದುಕೊಂಡ ರೈತರಿಗೆ ಉಳಿದ ಬೆಳೆಗೂ ಸೂಕ್ತ ಬೆಲೆ ಸಿಗದೆ ಹೋದರೆ ಅವರನ್ನು ಮತ್ತಷ್ಟು ನೋವಿಗೆ ತಳ್ಳಿದಂತಾಗುತ್ತದೆ. ಸರ್ಕಾರ ಅವರ ಬೇಡಿಕೆ ಈಡೇರಿಸದೇ ಹೋದರೆ ರಾಜ್ಯದ ವಿದ್ಯಾರ್ಥಿಗಳು ಕೂಡ ರೈತರನ್ನು ಬೆಂಬಲಿಸಿ ಬೀದಿಗಿಳಿದು ಹೋರಾಡಲು ಸಿದ್ಧವಿದೆ. ಕೂಡಲೇ ಸರ್ಕಾರ ಗಮನ ಹಸರಿಸಲು ಒತ್ತಾಯಿಸುತ್ತಿದ್ದೇವೆ. ಮಾನ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ, ಬೆಂಗಳೂರು ರವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರ ಸಲ್ಲಿಸಲಾಗುವುದು. ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಕೆ.ದೀಲೀಪ್ ಕುಮಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ, ಟಿ.ಭರತ್ ಹಂಪಾಪಟ್ಟಣ, ನಗರ ಕಾರ್ಯದರ್ಶಿ ಆಂಜಿನೇಯ, ಕಾರ್ಯಕರ್ತರಾದ ಮಾರುತಿ, ದರ್ಶನ್, ವಂಶಿ, ಶಶಿಕಲಾ ನಂದಿನಿ, ಮಹೇಶ್, ಪ್ರಜ್ವಲ್, ಲೋಹಿತ್, ವಿನೋದ್ ಹಾಗೂ ಮತ್ತಿತರರು ಭಾಗವಹಿಸಿದ್ದರು.