ಶಾಲೆಗಳನ್ನು ಮುಚ್ಚುತ್ತಿರುವ ಸರ್ಕಾರದ ನಡೆಯನ್ನು ಎಐಡಿಎಸ್ಓ ಖಂಡನೆ
AIDSO condemns the government's move to close schools
ಶಾಲೆಗಳನ್ನು ಮುಚ್ಚುತ್ತಿರುವ ಸರ್ಕಾರದ ನಡೆಯನ್ನು ಎಐಡಿಎಸ್ಓ ಖಂಡನೆ
ಬಳ್ಳಾರಿ 20: ರಾಜ್ಯದಕಾಂಗ್ರೆಸ್ ಸರ್ಕಾರವು ’ ಹಬ್ಅಂಡ್ ಸ್ಪೋಕ್ ’ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿದೆ. ಕಡಿಮೆ ಹಾಜರಾತಿಇರುವ ಶಾಲೆಗಳನ್ನು ಇತರ ಶಾಲೆಗಳೊಂದಿಗೆ ಸಂಯೋಜನೆಗೊಳಿಸುವುದಾಗಿ ಸರ್ಕಾರವು ತಿಳಿಸಿದೆ.ಈ ಮೂಲಕ ಕರ್ನಾಟಕರಾಜ್ಯಕಾಂಗ್ರೆಸ್ ಸರ್ಕಾರವುರಾಜ್ಯದ ಬಡಜನರ ಮಕ್ಕಳ ಶಿಕ್ಷಣದ ಆಶಾಕಿರಣವಾಗಿರುವ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ.4ಸಾವಿರಕ್ಕೂ ಹೆಚ್ಚು ಶಾಲೆಗಳನ್ನು ಮುಚ್ಚುತ್ತಿರುವ ಸರ್ಕಾರದ ಈ ನಡೆಯನ್ನುಎಐಡಿಎಸ್ಓ ಬಳ್ಳಾರಿ ಜಿಲ್ಲಾ ಸಮಿತಿಯುಅತ್ಯುಗ್ರ ಪದಗಳಲ್ಲಿ ಖಂಡಿಸುತ್ತದೆ.
ಹಿಂದಿನ ಬಿಜೆಪಿ ರಾಜ್ಯ ಸರ್ಕಾರವುಇದೇ ನೆಪವೊಡ್ಡಿಎನ್ಈಪಿ-2020ರ ಅಡಿಯಲ್ಲಿ 13,800 ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿತ್ತು.ಅದರ ವಿರುದ್ಧರಾಜ್ಯದ ವಿದ್ಯಾರ್ಥಿಗಳು ಎಐಡಿಎಸ್ಓ ನೇತೃತ್ವದಲ್ಲಿ ಬೃಹತ್ಆಂದೋಲನ ನಡೆಸಿ 35 ಲಕ್ಷಕ್ಕೂ ಹೆಚ್ಚು ಸಹಿಗಳನ್ನು ಸಂಗ್ರಹಿಸುವುದರ ಮೂಲಕ ಶಾಲೆಗಳನ್ನ ರಕ್ಷಿಸಿದ್ದರು.ಆದರೆ, ಈಗ ಮತ್ತೆ ಸರ್ಕಾರಿ ಶಾಲೆಗಳನ್ನು ಮುಚ್ಚುವುದರ ಮುಖಾಂತರಕರ್ನಾಟಕರಾಜ್ಯಕಾಂಗ್ರೆಸ್ ಸರ್ಕಾರವುರಾಜ್ಯದರೈತ-ಕಾರ್ಮಿಕರು ಹಾಗೂ ಜನ ಸಾಮಾನ್ಯರಿಗೆ ವಿಶ್ವಾಸದ್ರೋಹವೆಸಗಿದೆ.
ಬಡವರ ಮಕ್ಕಳಿಂದ ಶಾಶ್ವತವಾಗಿ ಶಿಕ್ಷಣವನ್ನು ಕಿತ್ತುಕೊಳ್ಳುವ ಹುನ್ನಾರಇದಾಗಿದೆ. ಹಾಜರಾತಿಕಡಿಮೆಯಿರುವ ಶಾಲೆಗಳನ್ನು ಮುಚ್ಚುವುದು, ’ನೆಗಡಿ ಬಂದರೆ ಮೂಗು ಕತ್ತರಿಸಿದಂತೆ’! ಸರ್ಕಾರವುತನ್ನ ಈ ಅವೈಜ್ಞಾನಿಕ ಮತ್ತುಅಪ್ರಜಾತಾಂತ್ರಿಕಜನವಿರೋಧಿ ನಿರ್ಧಾರವನ್ನುಕೈಬಿಡಬೇಕು ಹಾಗೂ ಕೂಡಲೇ ಹಾಜರಾತಿಕಡಿಮೆಯಿರುವ ಶಾಲೆಗಳನ್ನು ಅವಶ್ಯಕ ಸೌಲಭ್ಯಗಳನ್ನು ನೀಡಿರಕ್ಷಿಸಬೇಕೆಂದುಎಐಡಿಎಸ್ಓರಾಜ್ಯ ಸರ್ಕಾರವನ್ನುಆಗ್ರಹಿಸುತ್ತದೆ ಹಾಗೂ ಇದರ ವಿರುದ್ಧ ಪ್ರಬಲ ಪ್ರತಿರೋಧ ಚಳುವಳಿ ಬೆಳೆಸಬೇಕೆಂದು ರಾಜ್ಯದ ವಿದ್ಯಾರ್ಥಿಗಳು, ಪಾಲಕರು ಹಾಗೂ ಶಿಕ್ಷಣಪ್ರೇಮಿ ಜನತೆಗೆಕರೆ ನೀಡುತ್ತದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 