ಮನರೇಗಾ ಕಾಯ್ದೆ ತಿದ್ದುಪಡಿವಿರೋಧಿಸಿ ಎಐಕೆಕೆಎಂ ಎಸ್ ರಾಜ್ಯವ್ಯಾಪಿ ಬೃಹತ್ ಪ್ರತಿಭಟನೆ
AIKKMS holds massive statewide protest against MGNREGA amendment
ಧಾರವಾಡ ಹುಬ್ಬಳ್ಳಿ 27: ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ) ಮಸೂದೆ- 2025 (ವಿಬಿಹಿಜಿ ಆರ್ ಎ ಎಮ್ ಜಿ) ಕೂಡಲೇ ಹಿಂತೆಗೆದುಕೊಳ್ಳಬೇಕು ಎಂದು ಎಐಕೆಕೆಎಂ ಎಸ್ ರೈತ ಸಂಘಟನೆ ನೇತೃತ್ವದಲ್ಲಿ ನೂರಾರು ಕೂಲಿ ಕಾರ್ಮಿಕರು ಇಂದು ಕಲಾಭವನ ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮಾನ್ಯ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಪ್ರಧಾನಿ ಯವರಿಗೆ ಮತ್ತು ಮಾನ್ಯ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘದ ರಾಜ್ಯಉಪಾಧ್ಯಕ್ಷರಾದ ವಿ ನಾಗಮ್ಹಾಳ ಅವರು ಮಾತನಾಡುತ್ತಾ ಗ್ರಾಮೀಣ ಜನತೆಗೆ ಉದ್ಯೋಗ ಖಾತ್ರಿಪಡಿಸುವ ಉದ್ದೇಶದಿಂದ ತಂದಿದ್ದ ಎಂಜಿ ನರೇಗಾ ಕಾಯ್ದೆಯ ಬದಲಿಗೆ 'ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) ಮಸೂದೆ- 2025 ಅನ್ನು ಜಾರಿಗೊಳಿಸಲು ಪ್ರಯತ್ನಿಸುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ಹೀನ ಪ್ರಯತ್ನವನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ.
ಈ ಮಸೂದೆಯು ಎಂಜಿ ನರೇಗಾ ಕಾಯ್ದೆಯನ್ನು ಮತ್ತು ಅದರಲ್ಲಿದ್ದ ಉದ್ಯೋಗದ ಶಾಸನಬದ್ಧ ಖಾತ್ರಿಯನ್ನು ತೆಗೆದುಹಾಕುವುದು ಹಾಗೂ ಅದರ ಬದಲಿಗೆ ಗ್ರಾಮೀಣ ಬಡ ಕುಟುಂಬಗಳಿಗೆ ಕೇಂದ್ರ ಸರ್ಕಾರದ ಯೋಜನೆಯ ಅನುಷ್ಠಾನದಿಂದಾಗಿ ಉದ್ಯೋಗದ ಭರವಸೆಯನ್ನು ಇಲ್ಲವಾಗಿಸುತ್ತದೆ. ಯೋಜನೆಯ ಕುರಿತು ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರಗಳ ಯಾವುದೇ ಪಾತ್ರವನ್ನು ನಿರಾಕರಿಸುತ್ತಾ, ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಅಧಿಕಾರ ನೀಡಿ, ಒಕ್ಕೂಟ ವ್ಯವಸ್ಥೆ ಅಡಿಪಾಯವನ್ನು ನಾಶಗೊಳಿಸುವ ಪ್ರಯತ್ನವಾಗಿದೆ. ಹಾಗೆಯೇ, ಕೇಂದ್ರ ಬಿಜೆಪಿ ಸರ್ಕಾರವು ತನ್ನ ಹಣಕಾಸಿನ ಜವಾಬ್ದಾರಿಯನ್ನು ಶೇ.60 ಕ್ಕೆ (ಹಿಂದೆ ಶೇ.100) ಇಳಿಸುವುದು ಮತ್ತು ಅದರ ಶೇ.40 ರಷ್ಟು ಹೊರೆಯನ್ನು ರಾಜ್ಯ ಸರ್ಕಾರಗಳಿಗೆ ವರ್ಗಾಯಿಸುವುದಾಗಿದೆ.ಜಾಬ್ ಕಾರ್ಡ್ಗಳನ್ನು ಸುಧಾರಣೆ ಮಾಡುವ ಘೋಷಣೆಯ ಮೂಲಕ ಗ್ರಾಮೀಣ ಜನರನ್ನು ಉದ್ಯೋಗದ ಹಕ್ಕಿನಿಂದ ವಂಚಿತರನ್ನಾಗಿ ಮಾಡುವುದು ಈ ಯೋಜನೆಯ ಭಾಗವಾಗಿದೆ.ಈಗ ಗ್ರಾಮೀಣ ಬಡ ಜನತೆಗೆ ಹೆಚ್ಚು ಹೆಚ್ಚು ಉದ್ಯೋಗಗಳನ್ನು ಒದಗಿಸುವುದು ಈ ಘಳಿಗೆಯ ಅವಶ್ಯಕತೆ ಮತ್ತು ಈ ಕಾರ್ಯ ಕೇಂದ್ರ ಸರ್ಕಾರದ ಜವಾಬ್ದಾರಿ ಆಗಿರುವಾಗ,ಈ ಕೇಂದ್ರ ಬಿಜೆಪಿ ಸರ್ಕಾರ ಅದಕ್ಕೆ ಸಂಪೂರ್ಣವಾಗಿ ವಿರುದ್ಧ ಗತಿಯಲ್ಲಿ ನಡೆದಿದೆ.
ಈ ಪ್ರಸ್ತಾಪಿತ ಮಸೂದೆಯು ಗ್ರಾಮೀಣ ಬಡ ಜನತೆಯ ಬದುಕುವ ಹಕ್ಕಿನ ಮೇಲಿನ ದಾಳಿ ಆಗಿರುವುದರಿಂದ ಅದನ್ನು ತೀರ್ವವಾಗಿ ಖಂಡಿಸುತ್ತೇವೆ ಎಂದರು.ಜಿಲ್ಲಾ ಅಧ್ಯಕ್ಷರಾದ ದೀಪಾ ಧಾರವಾಡ ಮಾತನಾಡಿ ಕೇಂದ್ರ ಸರ್ಕಾರ ವಿಬಿ ಜಿ ರಾಮ್ ಜಿ ಮಸೂದೆಯನ್ನು ಕೈ ಬಿಟ್ಟು, ಈ ಹಿಂದೆ ಇದ್ದ ಮನರೇಗಾ ಯೋಜನೆಯನ್ನು ಮುಂದುವರಿಸಬೇಕು, ಮತ್ತು ಕೂಲಿ ಕಾರ್ಮಿಕರ ಬದುಕನ್ನು ಸುಧಾರಿಸುವ ಸಲುವಾಗಿ ಪ್ರತಿ ಕುಟುಂಬಕ್ಕೆ 200 ಮಾನವ ದಿನಗಳ ಕೆಲಸ, 600 ರೂ ವೇತನವನ್ನು ನೀಡಬೇಕು.ಇಲ್ಲದಿದ್ದಲ್ಲಿ, ಕೇಂದ್ರ ಬಿಜೆಪಿ ಸರ್ಕಾರದ ಈ ಜನ ವಿರೋಧಿ, ಕಾರ್ಮಿಕ ವರ್ಗ ವಿರೋಧಿ ಪ್ರಯತ್ನವನ್ನು ಸೋಲಿಸಲು, ವಿಬಿಜಿ ರಾಮ್ಜಿ ಮಸೂದೆ ಹಿಂದಕ್ಕೆ ಪಡೆಯುವವರೆಗೂಕೊನೆಯವರೆಗೂ ಹೋರಾಡಲು, ಮುಂದೆ ಬರಬೇಕೆಂದು ದುಡಿಯುವ ಜನರಿಗೆ ಕರೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಶರಣು ಗೋನವರ, ಸಮಿತಿಯ ಸದಸ್ಯರಾದ ರಾಣಪ್ಪ ಸಾವಂತನವರ, ಮಡಿವಾಳಪ್ಪ, ಮಲ್ಲಪ್ಪ, ಮಾರುತಿ ಪೂಜಾರ, ಸಿದ್ದಮ್ಮ, ಮಂಜುನಾಥ ಪಾಟೀಲ, ವಿಜಯಲಕ್ಷ್ಮಿ ನಿಕ್ಕಮ್, ಶ್ರೀದೇವಿ ದೊಡ್ಡಮನೆ, ಹನುಮವ್ವ, ಇಮಾಮ್ ಸಾಬ್, ಮುಂತಾದವರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 