ಆಧಾರ್ ಅಪ್ಡೇಟ್ ಈಗ ಮತ್ತಷ್ಟು ಸುಲಭ
Aadhaar update now easier
ನವದೆಹಲಿ:: ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಗಋಂಋ) ಮುಂಬರುವ ದಿನಗಳಲ್ಲಿ ಆಧಾರ್ನ ನೋಂದಣಿ ಮಾಡಿಕೊಳ್ಳುವ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭಗೊಳಿಸಲು ಕ್ರಮ ಕೈಗೊಳ್ಳಲು ಮುಂದಾಗಿದೆ. ವಿಶೇಷವಾಗಿ ಮೊಬೈಲ್ ಮೂಲಕವೇ ಅಗತ್ಯ ನವೀಕರಣ (ಗಠಿಜಚಿಣಜ) ಮಾಡಿಕೊಳ್ಳುವ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದೆ.
ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ ತಿಳಿಸಿರುವಂತೆ ಒಟಿಪಿ ಹಾಗೂ ಮುಖ ದೃಢೀಕರಣವನ್ನು ಬಳಸಿಕೊಂಡು ಬಳಕೆದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಬದಲಿಸಬಹುದಾಗಿದೆ. ಈ ಮೊದಲು ಮೊಬೈಲ್ ಸಂಖ್ಯೆ ಬದಲಿಸಲು ಗ್ರಾಮ ಒನ್ ಕೇಂದ್ರದಲ್ಲಿ ಸರತಿ ಸಾಲಿನಲ್ಲಿ ನಿಲ್ಲಬೇಕಿತ್ತು. ಈಗ ನೀಡಿರುವ ಉಪಕ್ರಮದಿಂದಾಗಿ ಆಧಾರ್ ಅಪ್ಡೇಟ್ ಅನ್ನು ಸುಲಭವಾಗಿ ಮೊಬೈಲ್ನಲ್ಲಿಯೇ ಮಾಡಬಹುದು. ಇದರಿಂದ ಸಮಯದ ಜೊತೆಗೆ ಹಣವನ್ನು ಉಳಿತಾಯ ಮಾಡಬಹುದು.
ಈ ಅಪ್ಲಿಕೇಶನ್ ಆಂಡ್ರಾಯ್ಡ್ ಮತ್ತು ಓಖ ಬಳಕೆದಾರರಿಗೆ ಲಭ್ಯವಿದೆ. ಇದು ಸುರಕ್ಷಿತ ಮತ್ತು ಅನುಕೂಲಕರ ಆಧಾರ್ ನಿರ್ವಹಣೆಯನ್ನು ಹೊಂದಿದೆ. ಸಾರ್ವಜನಿಕರ ವೈಯಕ್ತಿಕ ಡೇಟಾ ಕೂಡಾ ಸುರಕ್ಷಿತವಾಗಿರಲಿದೆ ಎಂದು ಗಋಂಋ ತಿಳಿಸಿದೆ. ಈ ಯೋಜನೆ ’ನನ್ನ ಆಧಾರ್ ನನ್ನ ಗುರುತು’ ಅಭಿಯಾನದಡಿ ಜಾರಿಯಾಗಿದೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 