ನಾಳೆ ಅಭಯ ಆಂಜನೇಯಸ್ವಾಮಿ ಮೂರ್ತಿ ಪ್ರತಿಷ್ಠಾಪನೆ
Abhay Anjaneyaswamy idol installation tomorrow
ನಾಳೆ ಅಭಯ ಆಂಜನೇಯಸ್ವಾಮಿ ಮೂರ್ತಿ ಪ್ರತಿಷ್ಠಾಪನೆ
ಕಂಪ್ಲಿ 14: ತಾಲೂಕಿನ ಸಣಾಪುರ ಗ್ರಾಪಂಯ ಬಸವೇಶ್ವರ ಕ್ಯಾಂಪಿನಲ್ಲಿ ಆರಾಧ್ಯ ದೇವ ಅಭಯ ಆಂಜನೇಯ್ಯಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಹೋಮ ಹವನ ಸೇರಿದಂತೆ ನಾನಾ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಶನಿವಾರ ಜರುಗಿದವು. ಇಲ್ಲಿನ ದೇವಸ್ಥಾನದಲ್ಲಿ ಡಿ.15ರಂದು ಆಂಜನೇಯ್ಯಸ್ವಾಮಿ ಶಿಲಾ ಮೂರ್ತಿ ಪ್ರತಿಷ್ಠಾಪನೆ ಅದ್ಧೂರಿಯಾಗಿ ಜರುಗಲಿದೆ. ಈ ಹಿನ್ನಲೆ ಶನಿವಾರ ಬೆಳಿಗ್ಗೆ ದೇವಸ್ಥಾನದಲ್ಲಿ ಪುರೋಹಿತ ಪಿ.ಶಿವರಾಮ್ ಕೃಷ್ಣ ಅವರ ನೇತೃತ್ವದಲ್ಲಿ ಮಹಾಗಣಪ ಪೂಜೆ, ಮಹಾಭಿಷೇಕ, ನವಗ್ರಹ ಹೋಮ, ದೇವತೆ ಹೋಮ, ಧ್ಯಾನ ದಿವಸ, ಸಂಜೆ ಶಿಲಾ ಮೂರ್ತಿ ಮೆರವಣಿಗೆ ಹಾಗೂ ಮಹಾಮಂಗಳಾರತಿ ಭಕ್ತರ ಸಮ್ಮುಖದಲ್ಲಿ ನೆರವೇರಿದವು. ಮಹಿಳೆಯ ಕೋಲಾಟ ಜರುಗಿದವು. ಈ ಸಂದರ್ಭದಲ್ಲಿ ಬಸವೇಶ್ವರಕ್ಯಾಂಪಿನ ಸಕಲ ಸದ್ಭಕ್ತರು ಪಾಲ್ಗೊಂಡಿದ್ದರು. ಭಾನುವಾರ ಬೆಳಿಗ್ಗೆ ಆಂಜನೇಯಸ್ವಾಮಿ ಶಿಲಾ ಮೂರ್ತಿ ಲೋಕಾರೆ್ಣಗೊಳ್ಳಲಿದೆ. ಮಹಿಳೆಯರ ಕೋಲಾಟ ಜರುಗಿದವು.
ತಾಲೂಕಿನ ಸಣಾಪುರ ಗ್ರಾಪಂ ವ್ಯಾಪ್ತಿಯ ಬಸವೇಶ್ವರಕ್ಯಾಂಪಿನ ಆಂಜನೇಯ್ಯಸ್ವಾಮಿ ದೇವಸ್ಥಾನದಲ್ಲಿ ಹೋಮ ಹವನ ಸೇರಿದಂತೆ ನಾನಾ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 