ಅಪಘಾತ ವಿಮೆ ಪರಿಹಾರ ರೂ.10 ಲಕ್ಷದ ಚೆಕ್ ವಿತರಣೆ
Accident insurance compensation cheque of Rs. 10 lakhs distributed
ಧಾರವಾಡ ಜ. 17: ಹುಬ್ಬಳ್ಳಿ ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಇಂದು (ಜ.17) ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಹಾಗೂ ಬಜಾಜ್ ಜನರಲ್ ಇನ್ಸೂರೆನ್ಸ್ ಸಹಭಾಗಿತ್ವದಲ್ಲಿ ಅಪಘಾತ ವಿಮಾ ಚೆಕ್ ವಿತರಣಾ ಕಾರ್ಯಕ್ರಮ ಜರುಗಿತು.
ದಿ.ಮಲ್ಲಿಕಾರ್ಜುನ ಮೆಣಸಿನಕಾಯಿ ದುರದೃಷ್ಟವಶಾತ್ ಕಳೆದ ತಿಂಗಳು ಅಪಘಾತದಲ್ಲಿ ಅಸುನೀಗಿದರು. ದಿ.ಮಲ್ಲಿಕಾರ್ಜುನ ಮೆಣಸಿನಕಾಯಿ ಅವರು ಅಂಚೆ ಕಚೇರಿಯಲ್ಲಿ ರೂ. 557 ರ ಅಪಘಾತ ವಿಮೆ ಮಾಡಿಸಿದ್ದು, ಅವರ ಕಾಲಾನಂತರ ನಾಮಿನಿಯಾದ ಪವಿತ್ರಾ ಮಲ್ಲಿಕಾರ್ಜುನ ಮೆಣಸಿನಕಾಯಿ ಅವರಿಗೆ ರೂ. 10 ಲಕ್ಷದ ಚೆಕ್ನ್ನು ವಿತರಿಸಲಾಯಿತು. ಇವರಿಗೆ ವಿಜಯನಗರ ಸಬ್ ಆಫೀಸ್ ಪೋಸ್ಟವಿಮೆನ್ ಸಿದ್ದಮ್ಮ ಹೆಬಸೂರ್ ಅವರು ಅಪಘಾತ ವಿಮೆಯನ್ನು ನೀಡಿದ್ದರು.
ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಉತ್ತರ ಕರ್ನಾಟಕ ಪ್ರಾದೇಶಿಕ ಮುಖ್ಯಸ್ಥ ಜಗದೀಶ್ ಚಿಕ್ಕನರಗುಂದ, ಹುಬ್ಬಳ್ಳಿ ಹೆಡ್ ಪೋಸ್ಟ್ ಮಾಸ್ಟರ್ ಮಧು ಸಾಗರ್, ಹುಬ್ಬಳ್ಳಿ ಪೂರ್ವ ವಲಯದ ಉಪ ವಿಭಾಗದ ಮುಖ್ಯಸ್ಥ ವಿವೇಕ್ ನಿಂಬರಗಿ, ಧಾರವಾಡ ಐಪಿಪಿಬಿ ಮ್ಯಾನೇಜರ್ ಶಿವಯೋಗಿ ಅವರ ಉಪಸ್ಥಿತಿಯಲ್ಲಿ ಚೆಕ್ಕನ್ನು ವಿತರಿಸಲಾಯಿತು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 