ಆಕಸ್ಮಿಕ ಬೆಂಕಿ: ಅಪಾರ ಹಾನಿ
ಮುಂಡಗೋಡ 02: ಪಟ್ಟಣದ ಆನಂದ ನಗರದಲ್ಲಿ ಬುಧವಾರ ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿಯಾಗಿದೆ.
ಶೇಖಯ್ಯಾ ಹಿರೇಮಠ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಮನೆಯವರು ನೀರು ಕಾಯಿಸಲು ಬೆಂಕಿ ಹಚ್ಚಿ ಹೊರಗೆ ಹೋಗಿದ್ದಾರೆ. ಸ್ವಲ್ಪ ಸಮಯದ ನಂತರ ನೋಡ ನೋಡುತ್ತಲೆ ಬೆಂಕಿಯು ವ್ಯಾಪಿಸಿದೆ ಈ ಬೆಂಕಿ ಇತರ ಮನೆಗಳಿಗೂ ವ್ಯಾಪಿಸುವ ಸಾಧ್ಯತೆ ಕೂಡ ಇತ್ತು. ಆದರೆ ಅಗ್ನಿಶಾಮಕ ದಳದವರ ಕ್ಷಿಪ್ರ ಕಾಯರ್ಾಚರಣೆಯಿಂದಾಗಿ ಬೆಂಕಿ ವ್ಯಾಪಿಸುವುದನ್ನು ತಡೆಯಲು ಸಾಧ್ಯವಾಗಿದೆ. ಈ ಅವಘಡದಿಂದ ಕಟ್ಟಿಗೆ, ಹಂಚು, ಪಾತ್ರೆಗಳು, ಟಿ.ವಿ. ಮುಂತಾದ ಗೃಹಬಳಕೆ ವಸ್ತುಗಳು, ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ.ಈ ಅವಘಡದಿಂದ ಸುಮಾರ 15000ರೂ ಹಾನಿಯಾಗಿದೆ ಎನ್ನಲಾಗಿದೆ.
ಅಗ್ನಿ ಶಾಮಕದಳದ ಸಿಬ್ಬಂದಿಗಳಾದ ಯು.ಎಲ್.ಬಾಳೆಕಟ್ಟಿ, ಬಸವರಾಜ ಇಂಚಲ, ಗುರುಪ್ರಸಾದ ಕಮಲಾಕರ, ದುರ್ಗಪ್ಪ ಹರಿಜನ,ಶಿವಾಜಿ ರಾಣಿಗೇರ, ಲಕ್ಷ್ಮಣ ವರಕ ಬೆಂಕಿ ನಂದಿಸುವ ಕಾಯರ್ಾಚರಣೆಯಲ್ಲಿದ್ದರು.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 