ಸೋಗಿಯಲ್ಲಿ ಆಕಸ್ಮಿಕ ಬೆಂಕಿಗೆ 15 ಬಣವೆಗಳು ಭಸ್ಮ
Accidental fire destroyed 15 stacks in Sogi
ಸೋಗಿಯಲ್ಲಿ ಆಕಸ್ಮಿಕ ಬೆಂಕಿಗೆ 15 ಬಣವೆಗಳು ಭಸ್ಮ
ಹೂವಿನಹಡಗಲಿ 16: ಆಕಸ್ಮಿಕ ಬೆಂಕಿಗೆ 15 ಕ್ಕೂ ಹೆಚ್ಚು ಭತ್ತದ ಹುಲ್ಲು .ಮೆಕ್ಕೆಜೋಳ ಪರಾರಿ ಹಾಗೂ ಕಟ್ಟಿಗೆಗಳು, ಸುಟ್ಟು ಭಸ್ಮವಾದ ಘಟನೆ ತಾಲ್ಲೂಕಿನ ಸೋಗಿ ಗ್ರಾಮದಲ್ಲಿ ಭಾನುವಾರ ಜರುಗಿದೆ.ಸೋಗಿ ಗ್ರಾಮದ ರೇಣುಕ ಹೊರವಲಯದಲ್ಲಿ ಸಂಗ್ರಹಿಸಲ್ಪಟ್ಟ ತೊಗರಿ ಕಟ್ಟಿಗೆ, ಜೋಳದ ಕಣಕಿ, ಮೇವಿನ ಬಣವಿಗಳು ಕೂಡ ಸಂಪೂರ್ಣ ಸುಟ್ಟು ಹೋಗಿವೆ.’ಬೆಂಕಿ ಆವರಿಸುತ್ತಿರುವುದು ಕಂಡ ಕೂಡಲೇ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಲಾಯಿತು. ಹೂವಿನಹಡಗಲಿ. ಅಗ್ನಿಶಾಮಕ ವಾಹನ ಬರುವಷ್ಟರಲ್ಲಿ ಬೆಂಕಿಯ ವೇಗ ಹೆಚ್ಚಾಗಿ ಸುಟ್ಟು ಭಸ್ಮವಾಗಿವೆ. 20ಕ್ಕೂ ಅಧಿಕ ಯುವಕರು ಬೆಂಕಿ ನಂದಿಸಲು ಪ್ರಯತ್ನಪಟ್ಟರೂ ಪ್ರಯೋಜನವಾಗಲಿಲ್ಲ. ಪರಿಹಾರಕ್ಕೆ ಶಾಸಕರು ಸೂಚನೆ ;ರೈತರಾದ ನಾಗರಾಜ, ಆನಂದ, ಪೀಜರ ನಬೀಸಾಬ್, ಮಂಜಪ್ಪ, ಕೊಟ್ರೇಶ ಅವರಿಗೆ ಸೇರಿದ ಬಣವೆಗಳು ದನಕರುಗಳಿಗೆ ಸಂಗ್ರಹಿಸಿದ್ದ ಭತ್ತದ ಹುಲ್ಲು, ಬಣವಿಗಳು ಭಸ್ಮವಾದ ಹಿನ್ನೆಲೆಯಲ್ಲಿ ತಹಶೀಲ್ದಾರ ಸಂತೋಷ ಕುಮಾರ ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಪರಿಹಾರ ನೀಡಲು ಶಾಸಕ ಎಲ್.ಕೃಷ್ಣನಾಯಕ್ ಸೂಚಿಸಿದ್ದಾರೆ. ಸ್ಥಳಕ್ಕೆ ಬಿಜೆಪಿ ಅದ್ಯಕ್ಷ ಮಲ್ಲಿಕಾರ್ಜುನ. ಭೇಟಿ ನೀಡಿದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 