ಆಕಸ್ಮಿಕ ಬೆಂಕಿ ತಗುಲಿ 15 ಎಕರೆಯ ಹುಲ್ಲಿನ ಬಣವೆ ನಾಶ
ಕಂಪ್ಲಿ 17:ತಾಲ್ಲೂಕು ಸಮೀಪದ ನಂ.10 ಮುದ್ದಾಪುರ ಗ್ರಾಮದಲ್ಲಿ ಆಕಸ್ಮಿಕ ಬೆಂಕಿಯಿಂದ ಎರಡು ಮೇವಿನ ಬಣವೆಗಳು ಸುಟ್ಟ ಘಟನೆ ಮಂಗಳವಾರ ಬೆಳಗಿನ ಜಾವ ನಡೆದಿದೆ. ಗ್ರಾಮದ ಬಳ್ಳಾರಿ ತಿಪ್ಪಯ್ಯ ಹಾಗೂ ಬಳ್ಳಾರಿ ಶಿವರುದ್ರ ಎಂಬ ರೈತರಿಗೆ ಸೇರಿದ ಸುಮಾರು 40 ಎಕರೆಯಷ್ಟು ಮೇವಿನ ಬಣವೆಗಳಿಗೆ ಬೆಂಕಿ ತಗುಲಿದ ಪರಿಣಾಮ ಬಣವೆಗಳು ಬೆಂಕಿಗಾಹುತಿಯಾಗಿವೆ. ಬೆಂಕಿ ಅವಘಡದಿಂದ ಸುಮಾರು 1 ಲಕ್ಷ ನಷ್ಟ ಸಂಭವಿಸಿದೆ ಎನ್ನಲಾಗಿದೆ. ಗಂಗಾವತಿಯ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಶ್ರೀರಾಮರಂಗಾಪುರ: ಸಮೀಪದ ಸುಗ್ಗೇನಹಳ್ಳಿ ಗ್ರಾಪಂ ವ್ಯಾಪ್ತಿಯ ಶ್ರೀರಾಮರಂಗಾಪುರ ಗ್ರಾಮದಲ್ಲಿ ರೈತರೊಬ್ಬರು ಸಂಗ್ರಹಿಸಿಟ್ಟ ಲಕ್ಷಾಂತರ ಮೌಲ್ಯರ ಹುಲ್ಲಿನ ಬಣವೆ ಮಂಗಳವಾರ ಬೆಂಕಿಗೆ ಸುಟ್ಟು ಹೋಗಿದೆ. ಆಕಸ್ಮಿಕ ಬೆಂಕಿ ತಗುಲಿ 15 ಎಕರೆಯ ಒಂದು ಹುಲ್ಲಿನ ಬಣವೆ ಸುಟ್ಟು ಕರಕಲಾಗಿದೆ. ಹನುಮಂತಪ್ಪ ಎಂಬ ರೈತನ ಬಣವೆ ಸುಡಲಾಗಿದೆ. ಕುರುಗೋಡು ಅಗ್ನಿ ಶಾಮಕ ದಳದಿಂದ ಬೆಂಕಿ ನಂದಿಸಿದರೂ, ಬಣವೆ ಸುಟ್ಟು ಹೋಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 