ಆಕಸ್ಮಿಕ ಬೆಂಕಿ ತಗುಲಿ 15 ಎಕರೆಯ ಹುಲ್ಲಿನ ಬಣವೆ ನಾಶ
ಕಂಪ್ಲಿ 17:ತಾಲ್ಲೂಕು ಸಮೀಪದ ನಂ.10 ಮುದ್ದಾಪುರ ಗ್ರಾಮದಲ್ಲಿ ಆಕಸ್ಮಿಕ ಬೆಂಕಿಯಿಂದ ಎರಡು ಮೇವಿನ ಬಣವೆಗಳು ಸುಟ್ಟ ಘಟನೆ ಮಂಗಳವಾರ ಬೆಳಗಿನ ಜಾವ ನಡೆದಿದೆ. ಗ್ರಾಮದ ಬಳ್ಳಾರಿ ತಿಪ್ಪಯ್ಯ ಹಾಗೂ ಬಳ್ಳಾರಿ ಶಿವರುದ್ರ ಎಂಬ ರೈತರಿಗೆ ಸೇರಿದ ಸುಮಾರು 40 ಎಕರೆಯಷ್ಟು ಮೇವಿನ ಬಣವೆಗಳಿಗೆ ಬೆಂಕಿ ತಗುಲಿದ ಪರಿಣಾಮ ಬಣವೆಗಳು ಬೆಂಕಿಗಾಹುತಿಯಾಗಿವೆ. ಬೆಂಕಿ ಅವಘಡದಿಂದ ಸುಮಾರು 1 ಲಕ್ಷ ನಷ್ಟ ಸಂಭವಿಸಿದೆ ಎನ್ನಲಾಗಿದೆ. ಗಂಗಾವತಿಯ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಶ್ರೀರಾಮರಂಗಾಪುರ: ಸಮೀಪದ ಸುಗ್ಗೇನಹಳ್ಳಿ ಗ್ರಾಪಂ ವ್ಯಾಪ್ತಿಯ ಶ್ರೀರಾಮರಂಗಾಪುರ ಗ್ರಾಮದಲ್ಲಿ ರೈತರೊಬ್ಬರು ಸಂಗ್ರಹಿಸಿಟ್ಟ ಲಕ್ಷಾಂತರ ಮೌಲ್ಯರ ಹುಲ್ಲಿನ ಬಣವೆ ಮಂಗಳವಾರ ಬೆಂಕಿಗೆ ಸುಟ್ಟು ಹೋಗಿದೆ. ಆಕಸ್ಮಿಕ ಬೆಂಕಿ ತಗುಲಿ 15 ಎಕರೆಯ ಒಂದು ಹುಲ್ಲಿನ ಬಣವೆ ಸುಟ್ಟು ಕರಕಲಾಗಿದೆ. ಹನುಮಂತಪ್ಪ ಎಂಬ ರೈತನ ಬಣವೆ ಸುಡಲಾಗಿದೆ. ಕುರುಗೋಡು ಅಗ್ನಿ ಶಾಮಕ ದಳದಿಂದ ಬೆಂಕಿ ನಂದಿಸಿದರೂ, ಬಣವೆ ಸುಟ್ಟು ಹೋಗಿದೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 