ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ: ಸಚಿವ ದಿನೇಶ್ ಗುಂಡೂರಾವ್
Action against private hospitals performing unnecessary caesarean deliveries to collect money: Mini
ಬೆಳಗಾವಿ ಸುವರ್ಣಸೌಧ,(ಡಿ.08): ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆ ಗೆ ಉತ್ತರಿಸಿ ಮಾತನಾಡಿದರು.
ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವಂತಹ ಖಾಸಗಿ ಆಸ್ಪತ್ರೆಗಳನ್ನು ನಿರ್ದಿಷ್ಟವಾಗಿ ಗುರುತಿಸಿರುವುದಿಲ್ಲ. ಹಾಗೂ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡಿರುವ ಬಗ್ಗೆ, ಜಿಲ್ಲಾ, ಕೆ.ಪಿ.ಎಂ.ಇ. ನೋಂದಣಿ ಮತ್ತು ಕುಂದು ಕೊರತೆ ನಿವಾರಣಾ ಪ್ರಾಧಿಕಾರದಲ್ಲಿ ಯಾವುದೇ ದೂರುಗಳು ಸಾರ್ವಜನಿಕರಿಂದ ಸ್ವೀಕೃತವಾಗಿರುವುದಿಲ್ಲ.
ದೂರುಗಳು ಬಂದಲ್ಲಿ ನಿಯಮ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕೆ ಪಿ ಎಂ ಇ ಅಧಿನಿಯಮದ ಸೆಕ್ಷನ್ 15 ಉಪಬಂಧ 1ರನ್ವಯ ಕ್ರಮ ಜರುಗಿಸಲಾಗುವುದು ಎಂದರು. ಗರ್ಭಿಣಿಯರಿಗೆ ತಪಾಸಣೆ ಮಾಡುವ ಸಂದರ್ಭದಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಅನುಸರಿಬೇಕಾದ ನೀತಿ ನಿಯಮಗಳಿದ್ದು,ನಿಯಮ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕೆ.ಪಿ.ಎಂ.ಇ, ಅಧಿನಿಯಮದ ಸೆಕ್ಷನ್15 ಉಪಬಂಧ 1ರನ್ವಯ ಕ್ರಮ ಜರುಗಿಸಲಾಗುವುದು ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 