ತಾಯಿ ಚನ್ನಮ್ಮಾಜಿಯ ಶೌರ್ಯ, ಆದರ್ಶಗಳನ್ನು ಅಳವಡಿಸಿಕೊಳ್ಳಿ: ರೋಹಿಣಿ ಪಾಟೀಲ
Adopt the bravery and ideals of Mother Channammaji: Rohini Patil
ತಾಯಿ ಚನ್ನಮ್ಮಾಜಿಯ ಶೌರ್ಯ, ಆದರ್ಶಗಳನ್ನು ಅಳವಡಿಸಿಕೊಳ್ಳಿ: ರೋಹಿಣಿ ಪಾಟೀಲ
ಚ. ಕಿತ್ತೂರು 24: ಜೀವನದಲ್ಲಿ ಮಹಿಳೆಯರು ತಾಯಿ ಕಿತ್ತೂರು ಚನ್ನಮ್ಮ ಅವರ ಶೌರ್ಯ, ಆದರ್ಶಗಳನ್ನು ಅಳವಡಿಸಿಕೊಂಡು ಮುಂದೆ ಬರಬೇಕೆಂದು ಕೆಪಿಸಿಸಿ ಸದಸ್ಯ ರೋಹಿಣಿ ಪಾಟೀಲ ಹೇಳಿದರು. ಅವರು ಶುಕ್ರವಾರದಂದು ಕಿತ್ತೂರು ಉತ್ಸವದ ಪ್ರಯುಕ್ತ ಪಟ್ಟದದ ಉತ್ಸವದ ಮುಖ್ಯ ವೇದಿಕೆಯಲ್ಲಿ ಕಿತ್ತೂರು ರಾಣಿ ಸಂಸ್ಥಾನದ ಕುರಿತು ರಾಜ್ಯ ಮಟ್ಟದ ಮಹಿಳಾ ವಿಚಾರ ಗೋಷ್ಠಿಯಲ್ಲಿ ಮಾತನಾಡಿದರು. ಆಂಗ್ಲ ಭಾಷಾ ಲೇಖಕರು, ವಿದ್ವಾಂಸರಾದ ಡಾ. ವಿಜಯಲಕ್ಷ್ಮಿ ತಿರ್ಲಾಪುರ ಮಾತನಾಡಿ ಚನ್ನಮ್ಮಾಜಿ ಅವರು ಬಾಲ್ಯದಲ್ಲಿ ಕುದರೆ ಸವಾರಿ, ಯುದ್ಧ ತಯಾರಿ, ಕತ್ತೆ ವರಸೆ ಇನ್ನೂ ಅನೇಕ ಕಲೆಗಳಲ್ಲಿ ಪರಿಣೀತರಾಗಿದ್ದರು ಎಂದರು. ರಾಣಿ ಚನ್ನಮ್ಮ ಅಧ್ಯಯನ ಫಿಠದ ನಿರ್ದೇಶಕರಾದ ಡಾ. ನಾಗರತ್ನ ಪರಾಂಡೆ ಮಾತನಾಡಿ ಚನ್ನಮ್ಮ ತಾಯಿ ಇತಿಹಾಸ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಭಾರತ ದೇಶದ ಹೆಮ್ಮೆಯ ಪ್ರಥಮ ಮಹಿಳಾ ಸ್ವತಂತ್ರ್ಯ ಹೋರಾಟಗಾರ್ತಿ ಆಗಿದ್ದರು ಎಂದರು. ಕಾರ್ಯಕ್ರಮದಲ್ಲಿ ಕಿತ್ತೂರು ಸಂಸ್ಥಾನದ ಆಡಳಿತ ವ್ಯವಸ್ಥೆಯಲ್ಲಿ ಮಹಿಳೆಯರ ಪಾತ್ರ ಕುರಿತು ಬೆಳಗಾವಿಯ ಸಾಹಿತಿಗಳಾದ ಡಾ. ನಿರ್ಮಲಾ ಬಟ್ಟಲ ಮಹಿಳಾ ವಿಚಾರ ಗೋಷ್ಠಿ ಮಾಡಿದರು. ಮಹಿಳೆಯರು ಹಾಗೂ ವಿದ್ಯಾರ್ಥಿನಿಯರಿಗೆ ರಾಣಿ ಚನ್ನಮ್ಮನ ಆದರ್ಶಗಳು ಕುರಿತು ಸಾಹಿತಿಗಳಾದ ಡಾ ಅರ್ಚನಾ ಅಥಣಿ ಮಾತನಾಡಿದರು. ಕಿತ್ತೂರು ಸಂಸ್ಥಾನದ ದತ್ತಕ ಪ್ರಕ್ರಿಯೆಯಲ್ಲಿ ಮಹಿಳೆಯರ ಪಾತ್ರ ಕುರಿತು ಧಾರವಾಡದ ನಿವೃತ್ತ ಪ್ರಾಚಾರ್ಯರಾದ ಡಾ ಸರಸ್ವತಿ ಕಳಸದ ವಿಚಾರ ಗೋಷ್ಠಿಯಲ್ಲಿ ಮಾತನಾಡಿದರು. ಕಿತ್ತೂರು ಸಂಸ್ಥಾನದ ರಾಣಿಯರ ಸಮನ್ವಯತೆ ಸಂದೇಶ ಕುರಿತು ಸಾಹಿತಿಗಳಾದ ಜ್ಯೋತಿ ಬಾದಾಮಿ ಮಾತನಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 