ಕೃಷಿ’ಯ ತರಬೇತಿ ಕಾರ್ಯಕ್ರಮ
Agriculture training program
ಕೃಷಿ’ಯ ತರಬೇತಿ ಕಾರ್ಯಕ್ರಮ
ಧಾರವಾಡ 15: ಉತ್ತರ ಕರ್ನಾಟಕ ಜನತೆಯ ಬಹುದಿನಗಳ ಬೇಡಿಕೆಯಾದ ‘ಸಿಹಿ ನೀರು ಮುತ್ತು (ಕಜಚಿಡಿಟ) ಕೃಷಿ’ಯ ಪ್ರಥಮ ತರಬೇತಿ ಕಾರ್ಯಕ್ರಮವನ್ನು ಅಕ್ಟೋಬರ್ 13 ರಂದು ಪ್ರಾರಂಭಿಸಲಾಯಿತು. ಎರಡು ದಿನಗಳ ಈ ತರಬೇತಿ ಕಾರ್ಯಕ್ರಮಕ್ಕೆ ಡಾ.ಕೆ.ವಿ.ಬಸವಕುಮಾರ ವಿದ್ಯಾಧಿಕಾರಿಗಳು(ಕೃಷಿ), ಕೃಷಿ ಮಹಾವಿದ್ಯಾಲಯ, ಹನುಮನಮಟ್ಟಿ ಇವರು ಮುತ್ತು ಕೃಷಿಯ ಸೂಕ್ಷ್ಮ ಪರಿಚಯದೊಂದಿಗೆ ಗಣ್ಯಮಾನ್ಯರಿಗೆ ಸ್ವಾಗತವನ್ನು ಕೋರಿದರು. ಇದೇ ಸಂದರ್ಭದಲ್ಲಿ ವಿಶ್ವವಿದ್ಯಾಲಯದಲ್ಲಿ ಮುತ್ತು ಕೃಷಿಯ ಯೋಜನೆಯ ಅನುಷ್ಠಾನಕ್ಕೆ ಕಾರಣೀಭೂತರಾದ ಹಾಗೂ ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಡಾ.ಬಿ.ಡಿ.ಬಿರಾದಾರ, ಸಂಶೋಧನಾ ನಿರ್ದೇಶಕರು, ತರಬೇತಿಯ ಹಿನ್ನಲೆ ಮತ್ತು ಉದ್ದೇಶಗಳನ್ನು ಶಿಬಿರಾರ್ಥಿಗಳಿಗೆ ತಿಳಿಸಿಕೊಟ್ಟರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕುಲಪತಿಗಳಾದ ಡಾ.ಪಿ.ಎಲ್.ಪಾಟೀಲ್ ಅವರು ಮುತ್ತು ಕೃಷಿ ಕೈಗೊಂಡು ಆರ್ಥಿಕ ಸ್ವಾವಲಂಬಿಗಳಾಗಲು ಸಣ್ಣ ಹಿಡುವಳಿದಾರರು, ಸ್ವಯಂ ಸಂಘಗಳು ಮತ್ತು ಮಹಿಳಾ ಉದ್ಯಮದಾರರಿಗೆ ಕರೆನೀಡಿದರು. ಕಾರ್ಯಕ್ರಮದಲ್ಲಿ ಡಾ.ಪಿ.ಯು.ಕೃಷ್ಣರಾಜ, ವಿದ್ಯಾಧಿಕಾರಿಗಳು, ಕೃಷಿ ಮಹಾವಿದ್ಯಾಲಯ, ಧಾರವಾಡ, ಡಾ. ಪ್ರಶಾಂತಿ ಎಸ್. ಕೆ, ಮುಖ್ಯಸ್ಥರು, ಜೈವಿಕ ತಂತ್ರಜ್ಞಾನ ವಿಭಾಗ ಹಾಗೂ ಇತರೇ ಸಿಬ್ಬಂದಿಗಳು ಉಪಸ್ಥಿತರಿದ್ದರು. ಈ ಯೋಜನೆಯ ಆಯೋಜಕರಾದ ಡಾ. ಎನ್. ಬಿ. ಮೊಗೇರ ಅವರು ವಂದನಾರೆ್ಣಯನ್ನು ಸಲ್ಲಿಸಿದರು. ರೈತರು, ಚಿಕ್ಕ ಹಿಡುವಳಿದಾರರು, ಆಸಕ್ತ ನವೋದ್ಯಮಿಗಳು ಸೇರಿದಂತೆ ಒಟ್ಟು 20 ಶಿಬಿರಾರ್ಥಿಗಳು ಈ ತರಬೇತಿಯಲ್ಲಿ ಭಾಗವಹಿಸಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 