ಉಪ ಮುಖ್ಯಮಂತ್ರಿಯಾದ ಬೆನ್ನಲ್ಲೇ ನೀರಾವರಿ ಹಗರಣದಿಂದ ಖುಲಾಸೆಗೊಂಡ ಅಜಿತ್ ಪವಾರ್
ajit pavar
ಮುಂಬೈ, ನ.25: 70,000 ಕೋಟಿ ರೂ.ಗಳ ನೀರಾವರಿ ಹಗರಣದಲ್ಲಿ ಭಾಗಿಯಾಗಿದ್ದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಭ್ರಷ್ಟಾಚಾರ ನಿಗ್ರಹ ದಳ ಸೋಮವಾರ ಕ್ಲೀನ್ ಚಿಟ್ ನೀಡಿದೆ.
ಅಜಿತ್ ಭಾಗಿಯಾಗಿದ್ದ ಕನಿಷ್ಠ ಒಂಬತ್ತು ಪ್ರಕರಣಗಳ ತನಿಖೆಯನ್ನು ಎಸಿಬಿ ಮುಕ್ತಾಯಗೊಳಿಸಿದೆ.
ಅಜಿತ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಎರಡು ದಿನಗಳ ನಂತರ ಈ ಬೆಳವಣಿಗೆ ನಡೆದಿರುವುದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ.
ಆದಾಗ್ಯೂ, ಈ ಯಾವುದೇ ಪ್ರಕರಣಗಳು ಅಜಿತ್ ಅವರಿಗೆ ಸಂಬಂಧಿಸಿಲ್ಲ ಎಂದು ಮಹಾರಾಷ್ಟ್ರ ಭ್ರಷ್ಟಾಚಾರ ನಿಗ್ರಹ ದಳದ ಮಹಾನಿರ್ದೇಶಕ ಪರಂಬೀರ್ ಸಿಂಗ್ ಹೇಳಿದ್ದಾರೆ.
ವಿದರ್ಭ ಪ್ರದೇಶದ ವಾಶಿಮ್, ಯವತ್ಮಾಲ್, ಅಮರಾವತಿ ಮತ್ತು ಬುಲ್ಧನಾದಲ್ಲಿನ ದೊಡ್ಡ ಮತ್ತು ಸಣ್ಣ ನೀರಾವರಿ ಯೋಜನೆಗಳಿಗೆ ಈ ಪ್ರಕರಣಗಳು ಸಂಬಂಧಿಸಿವೆ ಎನ್ನಲಾಗಿದೆ.
ಈ ಪ್ರಕರಣಗಳು 10 ವರ್ಷ ಹಿಂದಿನದ್ದಾಗಿದೆ. ಆಗ ಕಾಂಗ್ರೆಸ್-ಎನ್ಸಿಪಿ ಸರ್ಕಾರದಲ್ಲಿ ಅಜಿತ್ ಪವಾರ್ ನೀರಾವರಿ ಸಚಿವರಾಗಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 