ಉಪ ಮುಖ್ಯಮಂತ್ರಿಯಾದ ಬೆನ್ನಲ್ಲೇ ನೀರಾವರಿ ಹಗರಣದಿಂದ ಖುಲಾಸೆಗೊಂಡ ಅಜಿತ್ ಪವಾರ್
ajit pavar
ಮುಂಬೈ, ನ.25: 70,000 ಕೋಟಿ ರೂ.ಗಳ ನೀರಾವರಿ ಹಗರಣದಲ್ಲಿ ಭಾಗಿಯಾಗಿದ್ದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಭ್ರಷ್ಟಾಚಾರ ನಿಗ್ರಹ ದಳ ಸೋಮವಾರ ಕ್ಲೀನ್ ಚಿಟ್ ನೀಡಿದೆ.
ಅಜಿತ್ ಭಾಗಿಯಾಗಿದ್ದ ಕನಿಷ್ಠ ಒಂಬತ್ತು ಪ್ರಕರಣಗಳ ತನಿಖೆಯನ್ನು ಎಸಿಬಿ ಮುಕ್ತಾಯಗೊಳಿಸಿದೆ.
ಅಜಿತ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಎರಡು ದಿನಗಳ ನಂತರ ಈ ಬೆಳವಣಿಗೆ ನಡೆದಿರುವುದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ.
ಆದಾಗ್ಯೂ, ಈ ಯಾವುದೇ ಪ್ರಕರಣಗಳು ಅಜಿತ್ ಅವರಿಗೆ ಸಂಬಂಧಿಸಿಲ್ಲ ಎಂದು ಮಹಾರಾಷ್ಟ್ರ ಭ್ರಷ್ಟಾಚಾರ ನಿಗ್ರಹ ದಳದ ಮಹಾನಿರ್ದೇಶಕ ಪರಂಬೀರ್ ಸಿಂಗ್ ಹೇಳಿದ್ದಾರೆ.
ವಿದರ್ಭ ಪ್ರದೇಶದ ವಾಶಿಮ್, ಯವತ್ಮಾಲ್, ಅಮರಾವತಿ ಮತ್ತು ಬುಲ್ಧನಾದಲ್ಲಿನ ದೊಡ್ಡ ಮತ್ತು ಸಣ್ಣ ನೀರಾವರಿ ಯೋಜನೆಗಳಿಗೆ ಈ ಪ್ರಕರಣಗಳು ಸಂಬಂಧಿಸಿವೆ ಎನ್ನಲಾಗಿದೆ.
ಈ ಪ್ರಕರಣಗಳು 10 ವರ್ಷ ಹಿಂದಿನದ್ದಾಗಿದೆ. ಆಗ ಕಾಂಗ್ರೆಸ್-ಎನ್ಸಿಪಿ ಸರ್ಕಾರದಲ್ಲಿ ಅಜಿತ್ ಪವಾರ್ ನೀರಾವರಿ ಸಚಿವರಾಗಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 