ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ ವಿದ್ಯಾರ್ಥಿಗಳಿಗೆ ಅಲ್ಬೆಂಡಜೋಲ್ ಮಾತ್ರೆ ವಿತರಣೆ
Albendazole tablets distributed to students on National Deworming Day
ಹಾವೇರಿ 10 ; ಅಲ್ಬೆಂಡಜೋಲ್ ಮಾತ್ರೆಯನ್ನು ತೆಗೆದುಕೊಳ್ಳುವುದರಿಂದ ಅಪೌಷ್ಟಿಕತೆ, ರಕ್ತಹೀನತೆ ಹಾಗೂ ದೈಹಿಕ -ಮಾನಸಿಕ ಬೆಳವಣಿಗೆ ಕುಂಠಿತವಾಗುವುದನ್ನು ತಡೆಗಟ್ಟಬಹುದು ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ ಅವರು ಹೇಳಿದರು.
ನಗರದ ಸರ್ಕಾರಿ ಪ್ರಾಥಮಿಕ ಶಾಲೆ ನಂ.03ರಲ್ಲಿ ಮಂಗಳವಾರ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ (ಎನ್.ಡಿ.ಡಿ.) ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ 86,456 ಮಕ್ಕಳಿಗೆ ಮಾತ್ರೆ ನೀಡುವ ಗುರಿ ಹೊಂದಲಾಗಿದ್ದು, ಯಾವುದೇ ಮಕ್ಕಳು ಈ ಕಾರ್ಯಕ್ರಮದಿಂದ ಹೊರಗುಳಿಯದಂತೆ ಕ್ರಮವಹಿಸಲಾಗಿದೆ ಎಂದರು.
ಒಂದರಿಂದ 6 ವರ್ಷದ ಮಕ್ಕಳಿಗೆ ಅಂಗನವಾಡಿಗಳಲ್ಲಿ, ಆರರಿಂದ 16 ವರ್ಷದ ಮಕ್ಕಳಿಗೆ ಶಾಲೆಗಳಲ್ಲಿ, 16 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಕಾಲೇಜುಗಳಲ್ಲಿ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಅಂಗನವಾಡಿಗಳಲ್ಲಿ ಅಲ್ಬೆಂಡಜೋಲ್ ಮಾತ್ರೆಗಳನ್ನು ಉಚಿತವಾಗಿ ನೀಡಲಾಗುತ್ತದೆ. ಎಲ್ಲ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಮಕ್ಕಳಿಗೆ ಊಟದ ಮೊದಲು ಕೈತೊಳೆಯುವ ವಿಧಾನವನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಲಾಯಿತು.
ಜಿಲ್ಲ್ಲಾ ರೋಗವಾಹಕ ಮತ್ತು ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಸರಿತಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಎಮ್.ಹೆಚ್ ಪಾಟೀಲ ಅವರು ಅಲ್ಬೆಂಡಜೋಲ್ ಮಾತ್ರೆಯ ಉಪಯೋಗದ ಕುರಿತು ಮಾತನಾಡಿದರು.
ಮುಖ್ಯೋಪಾಧ್ಯಾಯರಾದ ಪ್ರಭಾವತಿ ಕೊಪ್ಪದ, ಅಧೀಕ್ಷಕ ಎಸ್.ಎಫ್ ಸಾಬಳದ, ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಎ.ಪಿ.ಪಾಟೀಲ, ಪ್ರಭಾರ ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣಪ್ಪ ಕನ್ನಮ್ಮನವರ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ರೇಖಾ ನಾಯ್ಕ ಇತರರು ಉಪಸ್ಥಿತರಿದ್ದರು. ಶಿವಕುಮಾರ ಎಸ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 