ಎಲ್ಲಾ ದೇವರುಗಳು ಒಂದೇ : ಸಂಗನಬಸವ
All gods are one: Sangana Basava
ಶಿಗ್ಗಾವಿ 19 : ಪಟ್ಟಣದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದವತಿಯಿಂದ ಶಿವರಾತ್ರಿ ಹಬ್ಬದ ಅಂಗವಾಗಿ ಪ್ರತಿವರ್ಷದಂತೆ ಈ ಬಾರಿಯು ಜ್ಯೋತಿರಲಿಂಗಗಳ ಪ್ರದರ್ಶನ ಮೆರವಣಿಗೆಗೆ ಶಿಗ್ಗಾವಿ ವಿರಕ್ತಮಠದ ಸಂಗನಬಸವ ಮಹಾಸ್ವಾಮಿಗಳು ಚಾಲನೆ ನೀಡಿದರು. ಚಾಲನೆ ನೀಡಿ ಮಾತನಾಡಿದ ಶ್ರೀಗಳು, ಮೌಲ್ಯಾಧಾರಿತ ಸಮಾಜ ಸ್ಥಾಪನೆ, ದ್ವೇಷರಹಿತ ಚಿಂತೆ. ಒತ್ತಡ, ಭಯ ರಹಿತ ಸುಂದರ ಸಮಾಜ ನಿರ್ಮಾಣವೇ ಶಿವರಾತ್ರಿ ಕಾರ್ಯಕ್ರಮಗಳ ಉದ್ದೇಶವಾಗಿದೆ. ಮಾನವೀಯ ಮೌಲ್ಯಗಳನ್ನು ಪುನರ್ ಸ್ಥಾಪಿಸುವ ಉದ್ದೇಶದಿಂದ ಈಶ್ವರಿ ವಿವಿ ಈ ಕಾರ್ಯ ನಡೆಸುತ್ತಿದೆ. ಎಲ್ಲಾ ದೇವರುಗಳು ಒಂದೇ ಎಂದು ಸಾರುವ ಮೂಲಕ ಪರಮಪಿತ ಶಿವ ಪರಮಾತ್ಮನ ಕುರಿತು ತಿಳಿಸಿಕೊಡುವುದಾಗಿದೆ ಎಂದರು.
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಭಾರತಿ ಅಕ್ಕನವರು ಮಾತನಾಡಿ ಧ್ಯಾನ ಮನುಷ್ಯನ ಬದುಕಿನಲ್ಲಿ ಶಿಸ್ತು ಮತ್ತು ಜೀವನಶೈಲಿಯನ್ನು ರೂಢಿಸುತ್ತದೆ. ಅಲ್ಲದೆ ಇದು ಬದುಕಿಗೆ ಸನ್ಮಾರ್ಗವನ್ನು ತೋರುವ ಒಂದು ನಿಯಮವಾಗಿದೆ, ಶಿವರಾತ್ರಿ ಪದವು ಅಂದಕಾರವನ್ನು ಸೂಚಿಸುತ್ತದೆ. ಅಜ್ಞಾನ, ಅಂಧಕಾರ ಹಾಗೂ ಅಧರ್ಮದ ಕತ್ತಲನ್ನ ಹೋಗಲಾಡಿಸುವುದೇ ಶಿವರಾತ್ರಿಯಾಗಿದೆ ಎಂದರು. ಪಟ್ಟಣದಲ್ಲಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಿಂದ ಈಶ್ವರ ದೇವಸ್ಥಾನದವರೆಗೆಜ್ಯೋತಿಲಿಂರ್ಗಗಳ ಪ್ರದರ್ಶನ ಮೆರವಣಿಗೆ ಸಾಗಿಬಂದಿತು. ಮೆರವಣಿಗೆಯಲ್ಲಿ ಮುಖಂಡರಾದ ನರಹರಿ ಕಟ್ಟಿ, ಶ್ರೀಕಾಂತ ಬುಳ್ಳಕ್ಕನವರ, ಉಮೇಶ ಗೌಳಿ ಸೇರಿದಂತೆ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ಸದಸ್ಯರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 