ಎಲ್ಲಾ ದೇವರುಗಳು ಒಂದೇ : ಸಂಗನಬಸವ
All gods are one: Sangana Basava
ಶಿಗ್ಗಾವಿ 19 : ಪಟ್ಟಣದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದವತಿಯಿಂದ ಶಿವರಾತ್ರಿ ಹಬ್ಬದ ಅಂಗವಾಗಿ ಪ್ರತಿವರ್ಷದಂತೆ ಈ ಬಾರಿಯು ಜ್ಯೋತಿರಲಿಂಗಗಳ ಪ್ರದರ್ಶನ ಮೆರವಣಿಗೆಗೆ ಶಿಗ್ಗಾವಿ ವಿರಕ್ತಮಠದ ಸಂಗನಬಸವ ಮಹಾಸ್ವಾಮಿಗಳು ಚಾಲನೆ ನೀಡಿದರು. ಚಾಲನೆ ನೀಡಿ ಮಾತನಾಡಿದ ಶ್ರೀಗಳು, ಮೌಲ್ಯಾಧಾರಿತ ಸಮಾಜ ಸ್ಥಾಪನೆ, ದ್ವೇಷರಹಿತ ಚಿಂತೆ. ಒತ್ತಡ, ಭಯ ರಹಿತ ಸುಂದರ ಸಮಾಜ ನಿರ್ಮಾಣವೇ ಶಿವರಾತ್ರಿ ಕಾರ್ಯಕ್ರಮಗಳ ಉದ್ದೇಶವಾಗಿದೆ. ಮಾನವೀಯ ಮೌಲ್ಯಗಳನ್ನು ಪುನರ್ ಸ್ಥಾಪಿಸುವ ಉದ್ದೇಶದಿಂದ ಈಶ್ವರಿ ವಿವಿ ಈ ಕಾರ್ಯ ನಡೆಸುತ್ತಿದೆ. ಎಲ್ಲಾ ದೇವರುಗಳು ಒಂದೇ ಎಂದು ಸಾರುವ ಮೂಲಕ ಪರಮಪಿತ ಶಿವ ಪರಮಾತ್ಮನ ಕುರಿತು ತಿಳಿಸಿಕೊಡುವುದಾಗಿದೆ ಎಂದರು.
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಭಾರತಿ ಅಕ್ಕನವರು ಮಾತನಾಡಿ ಧ್ಯಾನ ಮನುಷ್ಯನ ಬದುಕಿನಲ್ಲಿ ಶಿಸ್ತು ಮತ್ತು ಜೀವನಶೈಲಿಯನ್ನು ರೂಢಿಸುತ್ತದೆ. ಅಲ್ಲದೆ ಇದು ಬದುಕಿಗೆ ಸನ್ಮಾರ್ಗವನ್ನು ತೋರುವ ಒಂದು ನಿಯಮವಾಗಿದೆ, ಶಿವರಾತ್ರಿ ಪದವು ಅಂದಕಾರವನ್ನು ಸೂಚಿಸುತ್ತದೆ. ಅಜ್ಞಾನ, ಅಂಧಕಾರ ಹಾಗೂ ಅಧರ್ಮದ ಕತ್ತಲನ್ನ ಹೋಗಲಾಡಿಸುವುದೇ ಶಿವರಾತ್ರಿಯಾಗಿದೆ ಎಂದರು. ಪಟ್ಟಣದಲ್ಲಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಿಂದ ಈಶ್ವರ ದೇವಸ್ಥಾನದವರೆಗೆಜ್ಯೋತಿಲಿಂರ್ಗಗಳ ಪ್ರದರ್ಶನ ಮೆರವಣಿಗೆ ಸಾಗಿಬಂದಿತು. ಮೆರವಣಿಗೆಯಲ್ಲಿ ಮುಖಂಡರಾದ ನರಹರಿ ಕಟ್ಟಿ, ಶ್ರೀಕಾಂತ ಬುಳ್ಳಕ್ಕನವರ, ಉಮೇಶ ಗೌಳಿ ಸೇರಿದಂತೆ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ಸದಸ್ಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 