ಅಂಬರೀಶ್ರನ್ನು ಕಳೆದುಕೊಂಡ ನಾವೆಲ್ಲರೂ ದುರಾದೃಷ್ಟವಂತರು: ಸುಧಾರಾಣಿ
ಲೋಕದರ್ಶನ ವರದಿ
ಕೊಪ್ಪಳ 05: ಹಿರಿಯ ನಟ ಅಂಬರೀಶ್ ನಿಧನದಿಂದ ನಮ್ಮ ಕನ್ನಡ ಚಿತ್ರರಂಗ ಕುಟುಂಬವು ಒಂದು ದೊಡ್ಡ ಪರ್ವತವನ್ನು ಕಳೆದುಕೊಂಡಿದೆ. ಅಂಬರೀಶ್ ಅವರನ್ನು ಕಳೆದುಕೊಂಡ ನಾವೆಲ್ಲರೂ ನಿಜಕ್ಕೂ ದುರಾದೃಷ್ಟವಂತರು ಎಂದು ನಟಿ ಸುಧಾರಾಣಿ ಹೇಳಿದರು.
ಕೊಪ್ಪಳ ತಾಲೂಕಿನ ಹನಕುಂಟಿ ಗ್ರಾಮದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬರೀಶ್ ಅವರು ನಮ್ಮಂತ ಕಿರಿಯ ನಟ-ನಟಿಯರಿಗಷ್ಟೇ ಅಲ್ಲದೇ ಚಿತ್ರರಂಗಕ್ಕೆ ಮಾರ್ಗದರ್ಶಕರಾಗಿದ್ದರು. ಪ್ರತಿಯೊಬ್ಬರಿಗೂ ಪ್ರೀತಿ ಪಾತ್ರರಾಗಿದ್ದರು. ಇನ್ನೂ ಬಹಳಷ್ಟು ಕಾಲ ಅವರು ನಮ್ಮೊಂದಿಗೆ ಇರಬೇಕಾಗಿತ್ತು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಅವರ ಸಾವು ಇಂದಿಗೂ ಊಹಿಸಿಕೊಳ್ಳಲು ಆಗುವುದಿಲ್ಲ ಎಂದು ಸುಧಾರಾಣಿ ಅಂಬರೀಶ್ರನ್ನು ಸ್ಮರಿಸಿದರು. ನಟಿ ಮಯೂರಿ ಸೇರಿದಂತೆ ಮತ್ತೀತರರು ಉಪಸ್ಥಿತರಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 