ಅಂಬೇಡ್ಕರ್ ಓಣಿಯ ಮನೆ ಕಳ್ಳತನ: ಆರೋಪಿ ಬಂಧನ, 2.44 ಲಕ್ಷ ರೂ. ಚಿನ್ನಾಭರಣ ವಶ!
Ambedkar Oni's house burglary: Accused arrested, Rs 2.44 lakh worth of gold jewellery seized!
ಮುಂಡಗೋಡ 31: ಹೊರಬೀಡು ದಿನದಂದು ಮುಂಡಗೋಡ ಪಟ್ಟಣದಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ಮೂಲಕ ಭೇದಿಸಿ, ಅಂತರ ಜಿಲ್ಲಾ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ತಬಕದ ಹೊನ್ನಹಳ್ಳಿ ಗ್ರಾಮದ ನಿವಾಸಿ ಮಂಜುನಾಥ ಬಸವಂತಪ್ಪ ನಾಯಕ (34) ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಜನವರಿ 27 ರಂದು ಮಂಗಳವಾರ, ಹೊರಬೀಡು ದಿನದಂದು ಮುಂಡಗೋಡ ಪಟ್ಟಣದ ಅಂಬೇಡ್ಕರ್ ಓಣಿಯಲ್ಲಿ ವಾಸವಿರುವ ಬಸವರಾಜ ಮಲ್ಲಪ್ಪ ಚಲವಾದಿ ಎಂಬುವವರ ಮನೆಯ ಮುಂದಿನ ಬಾಗಿಲನ್ನು ಗಟ್ಟಿಯಾದ ವಸ್ತುವಿನಿಂದ ಒಡೆದು ಆರೋಪಿ ಒಳನುಗ್ಗಿದ್ದ. ಬಳಿಕ ಮನೆಯ ರೂಮಿನಲ್ಲಿ ಇರಿಸಿದ್ದ ಟ್ರಜರಿಯ ಬಾಗಿಲನ್ನು ಮುರಿದು ಅದರಲ್ಲಿ ಇಡಲಾಗಿದ್ದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಕಳ್ಳತನ ಮಾಡಿದ್ದನು. ಪೊಲೀಸರು ಆರೋಪಿಯಿಂದ 96,000 ಮೌಲ್ಯದ 6 ಗ್ರಾಂ ಬಂಗಾರದ ಗುಂಡಿನ ಸರ,
64,000 ಮೌಲ್ಯದ 4 ಗ್ರಾಂ ಬಂಗಾರದ ಎರ್ ರಿಂಗ್, 16,000 ಮೌಲ್ಯದ 1 ಗ್ರಾಂ ತೂಕದ ಮೂರು ಗುಂಡುಗಳಿರುವ ಲಕ್ಷ್ಮೀ ಲಾಕೆಟ್, 48,000 ಮೌಲ್ಯದ 3 ಗ್ರಾಂ ಬಂಗಾರದ ಉಂಗುರ, 16,000 ಮೌಲ್ಯದ 1 ಗ್ರಾಂ ಬಂಗಾರದ ಸೈಡ್ ರಿಂಗ್ ಮತ್ತು 4,000 ಮೌಲ್ಯದ ಬೆಳ್ಳಿಯ ಚೈನ್ ಸೇರಿದಂತೆ ಒಟ್ಟಾರೆ 2,44,000 ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಪೋಲಿಸ್ ಅಧೀಕ್ಷಕರು ದೀಪನ್ ಎಮ್.ಎನ್ ಐ.ಪಿ.ಎಸ್ , ಕೃಷ್ಣಮೂರ್ತಿ ಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಾರವಾರ, ಜಗದೀಶ ನಾಯ್ಕ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಕಾರವಾರ, ಶಿರಸಿ ಡಿವೈಎಸ್ಪಿ, ಗೀತಾ ಪಾಟೀಲ್ ಮಾರ್ಗದರ್ಶನದಲ್ಲಿ ಮುಂಡಗೋಡ ಸಿಪಿಐ ರಂಗನಾಥ ನೀಲಮ್ಮನವರ ರವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿದ್ದರು. ಮುಂಡಗೋಡ ಸಿಪಿಐ ರಂಗನಾಥ ನೀಲಮ್ಮನವರ ಹಾಗೂ ಅಪರಾಧ ವಿಭಾಗದ ಸಿಬ್ಬಂದಿಗಳಾದ ಮಂಜುನಾಥ ಚಿಂಚಲಿ, ಕೊಟೇಶ ನಾಗರವಳ್ಳಿ, ಅಣ್ಣಪ್ಪ ಬುಡಿಗೇರ, ತಿರುಪತಿ ಚೌಡಣ್ಣನವರ, ಬಸವರಾಜ ಲಂಬಾಣಿ ಮತ್ತು ಕಲ್ಲಪ್ಪ ಹೊನ್ನಿಹಳ್ಳಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 