ಬಸ್ ಸೌಕರ್ಯ ಒದಗಿಸಲು ಅಂಬೇಡ್ಕರ್ ಸೇನೆ ಮನವಿ
Ambedkar Sena appeals to provide bus facilities
ತಾಳಿಕೋಟಿ: ಪಟ್ಟಣದಿಂದ ಮುದ್ದೇಬಿಹಾಳ ಮಾರ್ಗಕ್ಕೆ ರಾತ್ರಿ ಏಳು ಗಂಟೆಯ ನಂತರ ರಾತ್ರಿ 9 ರವರೆಗೆ ಯಾವುದೇ ಬಸ್ ಸೇವೆ ಇಲ್ಲದ ಕಾರಣ ರಾತ್ರಿ 9:00 ನಂತರ ಹೋಗಲು ಮಹಿಳೆಯರಿಗೆ ಸಾರ್ವಜನಿಕರಿಗೆ ವೃದ್ಧರಿಗೆ ತೊಂದರೆಯಾಗುತ್ತಿದ್ದು ರಾತ್ರಿ ವೇಳೆ ಎಂಟು ಗಂಟೆಗೆ ಮುದ್ದೇಬಿಹಾಳ ಮಾರ್ಗಕ್ಕೆ ಒಂದು ಬಸ್ಸನ್ನು ಬೀಡಬೇಕೆಂದು ಒತ್ತಾಯಿಸಿ ಅಂಬೇಡ್ಕರ್ ಸೇನೆ ತಾಲೂಕ ಘಟಕದ ಪದಾಧಿಕಾರಿಗಳು ಶನಿವಾರ ಘಟಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು. ಮನವಿ ಪತ್ರದಲ್ಲಿ ಬಸ್ ನಿಲ್ದಾಣದ ಒಳಗಿನ ಸಿಸಿ ರಸ್ತೆ ತುಂಬಾ ಹಾಳಾಗಿ ತೆಗ್ಗು ಬಿದ್ದಿರುವುದರಿಂದ ಗಲೀಜು ನೀರು ನಿಂತು ಪ್ರಯಾಣಿಕರಿಗೆ ತೊಂದರೆ ಉಂಟಾಗುತ್ತಿದೆ ಮತ್ತು ವಾಹನಗಳು ಓಡಾಡಲು ಅನಾನಕೂಲವಾಗುವ ಕಾರಣ ಗುಣಮಟ್ಟದ ರಸ್ತೆ ಮಾಡಬೇಕೆಂದು ಕೇಳಿಕೊಳ್ಳಲಾಗಿದೆ.ಈ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆ ಜಿಲ್ಲಾ ಉಪಾಧ್ಯಕ್ಷಬಸ್ಸು ಈ ಮಾದರ, ಅಂಬೇಡ್ಕರ್ ಸೇನೆ ತಾಳಿಕೋಟೆ ತಾಲೂಕಾಧ್ಯಕ್ಷ ಗೋಪಾಲ ಕಟ್ಟಿಮನಿ, ತಾಲೂಕ ಖಜಾಂಚಿ ಪರಶುರಾ ತಳವಾರ, ಶಿವಪುರ ಗ್ರಾಮ ಘಟಕದ ಅಧ್ಯಕ್ಷ ಯಮನಪ್ಪ ನಾಯ್ಕೋಡಿ, ಆಸಿಫ್ ಕೆಂಭಾವಿ, ಭುವನ್ ಅಂಬಿಗೇರ ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 