ಬಸ್ ಸೌಕರ್ಯ ಒದಗಿಸಲು ಅಂಬೇಡ್ಕರ್ ಸೇನೆ ಮನವಿ
Ambedkar Sena appeals to provide bus facilities
ತಾಳಿಕೋಟಿ: ಪಟ್ಟಣದಿಂದ ಮುದ್ದೇಬಿಹಾಳ ಮಾರ್ಗಕ್ಕೆ ರಾತ್ರಿ ಏಳು ಗಂಟೆಯ ನಂತರ ರಾತ್ರಿ 9 ರವರೆಗೆ ಯಾವುದೇ ಬಸ್ ಸೇವೆ ಇಲ್ಲದ ಕಾರಣ ರಾತ್ರಿ 9:00 ನಂತರ ಹೋಗಲು ಮಹಿಳೆಯರಿಗೆ ಸಾರ್ವಜನಿಕರಿಗೆ ವೃದ್ಧರಿಗೆ ತೊಂದರೆಯಾಗುತ್ತಿದ್ದು ರಾತ್ರಿ ವೇಳೆ ಎಂಟು ಗಂಟೆಗೆ ಮುದ್ದೇಬಿಹಾಳ ಮಾರ್ಗಕ್ಕೆ ಒಂದು ಬಸ್ಸನ್ನು ಬೀಡಬೇಕೆಂದು ಒತ್ತಾಯಿಸಿ ಅಂಬೇಡ್ಕರ್ ಸೇನೆ ತಾಲೂಕ ಘಟಕದ ಪದಾಧಿಕಾರಿಗಳು ಶನಿವಾರ ಘಟಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು. ಮನವಿ ಪತ್ರದಲ್ಲಿ ಬಸ್ ನಿಲ್ದಾಣದ ಒಳಗಿನ ಸಿಸಿ ರಸ್ತೆ ತುಂಬಾ ಹಾಳಾಗಿ ತೆಗ್ಗು ಬಿದ್ದಿರುವುದರಿಂದ ಗಲೀಜು ನೀರು ನಿಂತು ಪ್ರಯಾಣಿಕರಿಗೆ ತೊಂದರೆ ಉಂಟಾಗುತ್ತಿದೆ ಮತ್ತು ವಾಹನಗಳು ಓಡಾಡಲು ಅನಾನಕೂಲವಾಗುವ ಕಾರಣ ಗುಣಮಟ್ಟದ ರಸ್ತೆ ಮಾಡಬೇಕೆಂದು ಕೇಳಿಕೊಳ್ಳಲಾಗಿದೆ.ಈ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆ ಜಿಲ್ಲಾ ಉಪಾಧ್ಯಕ್ಷಬಸ್ಸು ಈ ಮಾದರ, ಅಂಬೇಡ್ಕರ್ ಸೇನೆ ತಾಳಿಕೋಟೆ ತಾಲೂಕಾಧ್ಯಕ್ಷ ಗೋಪಾಲ ಕಟ್ಟಿಮನಿ, ತಾಲೂಕ ಖಜಾಂಚಿ ಪರಶುರಾ ತಳವಾರ, ಶಿವಪುರ ಗ್ರಾಮ ಘಟಕದ ಅಧ್ಯಕ್ಷ ಯಮನಪ್ಪ ನಾಯ್ಕೋಡಿ, ಆಸಿಫ್ ಕೆಂಭಾವಿ, ಭುವನ್ ಅಂಬಿಗೇರ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 