ವಿಜೃಂಭಣೆಯಿಂದ ಅಂಬಿಗರ ಚೌಡಯ್ಯ ಭಾವಚಿತ್ರ ಮೆರವಣಿಗೆ
Ambigara Chowdarya's portrait parade with great pomp
ಕಂಪ್ಲಿ 22: ತಾಲೂಕಿನ ಸಣಾಪುರ ಗ್ರಾಪಂಯ ಇಟಗಿ ಗ್ರಾಮದಲ್ಲಿ ಅಂಬಿಗರ ಚೌಡಯ್ಯ ಯುವಕರ ಸಂಘ ಹಾಗೂ ಗಂಗಾಮತಸ್ಥರ ಸಂಘದ ಸಹಯೋಗದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ 906ನೇ ಜಯಂತ್ಯೋತ್ಸವ ಹಿನ್ನಲೆ ಭಾವಚಿತ್ರ ಮೆರವಣಿಗೆ ಬುಧವಾರ ವಿಜೃಂಭಣೆಯಿಂದ ನಡೆಯಿತು. ಇಲ್ಲಿನ ನದಿ ತಟದಲ್ಲಿ ಗಂಗೆಪೂಜೆ ಸಲ್ಲಿಸಿದ ನಂತರ ಆರಂಭಗೊಂಡ ಮೆರವಣಿಗೆ ಗ್ರಾಮದ ಪ್ರಮುಖ ರಸ್ತೆಗಳ ಮೂಲಕ ಶರೀಫ್ ತಾತ ಮಠದವರೆಗೆ ತೆರಳಿ, ಪುನಃ ಅಂಬಿಗರ ಚೌಡಯ್ಯ ವೃತ್ತದಲ್ಲಿ ಸಂಪನ್ನಗೊಂಡಿತು. ಡೊಳ್ಳು ಕುಣಿತ, ಮಂಗಳವಾದ್ಯ ಹಾಗೂ ಮಹಿಳೆಯರ ಕುಂಭ, ಕಳಸ ಮೆರವು ನೀಡಿದವು. ಅಂಬಿಗರ ಚೌಡಯ್ಯ ಯುವಕರ ಸಂಘದ ಅಧ್ಯಕ್ಷ ಮಣ್ಣೂರು ವೆಂಕಟೇಶ ಮಾತನಾಡಿ, ಗಂಗಾಮತ ಸಮುದಾಯವು ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದೆ.
ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ಕೂಡಲೇ ಗಂಗಾಮತಸ್ಥರನ್ನು ಪರಿಶಿಷ್ಟ ಪಂಗಡ(ಎಸ್ಟಿ)ಕ್ಕೆ ಸೇರಿಸಬೇಕು. ಸಮಾಜವು ಶಿಕ್ಷಣದಲ್ಲಿ ಹಿಂದುಳಿದ್ದು, ಪೋಷಕರು ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಿದಾಗ ಉನ್ನತ ಹುದ್ದೆಯೊಂದಿಗೆ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ. ಸರ್ಕಾರವು ವಿಶೇಷ ಸೌಲಭ್ಯಗಳನ್ನು ಒದಗಿಸಬೇಕು ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ಎಂ.ಯಲ್ಲಪ್ಪ, ಶಾಮೀಲ್ ವಿರೇಶ, ಅಯೋಧ್ಯ ಪಕ್ಕಿರ್ಪ, ಉಮಾಪತಿ, ಜಂಬುನಾಥಗೌಡ, ಅಯೋಧ್ಯ ಶರಣಬಸುವ, ಸಣ್ಣ ವೆಂಕಟೇಶ, ಜಂತಕಲ್ ಮಂಜು, ದೊಡ್ಡ ವೆಂಕಟೇಶ, ಕಂಪ್ಲಿ ಶರಣ ಸೇರಿದಂತೆ ಮಹಿಳೆಯರು, ಮುಖಂಡರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 