ಸೌಹಾರ್ದ ಸಹಕಾರಿ ರಜತ ಮಹೋತ್ಸವ
Amicable Cooperative Silver Jubilee
ಸೌಹಾರ್ದ ಸಹಕಾರಿ ರಜತ ಮಹೋತ್ಸವ
ಹೂವಿನ ಹಡಗಲಿ 02: ಸೌಹಾರ್ದ ಸಹಕಾರಿ ಕಾಯ್ದೆ ಜಾರಿಗೆ ಬಂದ 25 ನೇ ವರ್ಷದ ರಜತ ಮಹೋತ್ಸವ, ಸಹಕಾರಿ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಬುಧವಾರ ಪಟ್ಟಣದ ಗಿರಿಮಲ್ಲಿಗೆ ಮಹಿಳಾ ಸೌಹಾರ್ದ ಸಹಕಾರಿಯಲ್ಲಿ ನೆರವೇರಿಸಲಾಯಿತು.ಸಂಯುಕ್ತ ಸಹಕಾರಿ ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ನಮ್ಮ ಸಹಕಾರಿಯು ಭಾಗಿಯಾಗಿರುವುದು ಹೆಮ್ಮೆಯ ಸಂಗತಿ ಎಂದು ಅಧ್ಯಕ್ಷೆ ಸವಿತಾ ಅಂಗಡಿ ಹೇಳಿದರು.
ಈ ಐತಿಹಾಸಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಮ್ಮ ಸಹಕಾರಿ ಠೇವಣಿದಾರರಿಗೆ ಹೆಚ್ಚಿನ ಮಟ್ಟದಲ್ಲಿ ಪಾರದರ್ಶಕ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸೋಣ ಎಂದರು.ನಿರ್ದೇಶಕಿ ಕುಂಬಾರಿ ಸವಿತಾ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರಗತಿಗೆ ಪೂರಕವಾಗಿ ಕೆಲಸ ನಿರಂತರವಾಗಿ ಮಾಡುವುದಾಗಿ ತಿಳಿಸಿದರು.ಉಪಾಧ್ಯಕ್ಷೆ ನರ್ಮದಾ ಯಲಗಚ್ಚಿನ, ನಿರ್ದೇಶಕರಾದ ಮಂಗಳಾ ವಾಲಿ ಶೆಟ್ಟರ್, ಸೌಮ್ಯ ತುರಕಾಣಿ, ವಿಜಯ ಕಡ್ಲಿ, ನಾಗರತ್ನ ಕುಂಚೂರ್,ಭುವನೇಶ್ವರಿ ಎ ಕೆ, ಲಲಿತಾ ಕೋರಿ, ವ್ಯವಸ್ಥಾಪಕಿ ಪೂಜಾ,ಪಿಗ್ಮಿ ಕಲೆಕ್ಟರ್ ವೀರನಗೌಡ ಇತರರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 