ಅಮ್ಮಿನಬಾವಿ ಇಂದು ನಂದೀಶ್ವರ ಜಾತ್ರೆ
ಲೋಕದರ್ಶನವರದಿ
ಧಾರವಾಡ 18 : ಇಲ್ಲಿಗೆ ಸಮೀಪದ ತಾಲೂಕಿನ ಅಮ್ಮಿನಬಾವಿ ಗ್ರಾಮದ ಪ್ಯಾಟಿ ಬಸವಣ್ಣ (ನಂದೀಶ್ವರ) ದೇವರ ವಾಷರ್ಿಕ ಜಾತ್ರಾ ಮಹೋತ್ಸವ ಶುಕ್ರವಾರ (ಏಪ್ರೀಲ್ 19 ರಂದು) ದವನದ ಹುಣ್ಣಿಮೆಯ ದಿನ ಜರುಗಲಿದೆ.
ಜಾತ್ರೆಯ ಅಂಗವಾಗಿ ಪ್ರಾತಃಕಾಲದಲ್ಲಿ ಬಸವಣ್ಣ (ನಂದೀಶ್ವರ) ದೇವರ ವಿಗ್ರಹಕ್ಕೆ ಏಕಾದಶ ಮಹಾರುದ್ರಾಭಿಷೇಕ, ನೂರೊಂದು ಬಿಲ್ವಾರ್ಚನೆ, ಅಲಂಕಾರ ಪೂಜೆ, ಮಹಾಮಂಗಳಾರತಿ ಮುಂತಾದ ಪೂಜಾ ಕಾರ್ಯಗಳು ಜರುಗುವವು. ನಂತರ ಮಹಾಪ್ರಸಾದ ವಿತರಣೆ ನಡೆಯುವುದು.
ಸಂಜೆ 4.30 ಗಂಟೆಗೆ ಅಲಂಕೃತ ರಥೋತ್ಸವವು ವಿವಿಧ ಜನಪದ ವಾದ್ಯ ಮೇಳ ಗಳೊಂದಿಗೆ ವಿಜೃಂಭಣೆ ಯಿಂದ ನಡೆಯಲಿದ್ದು, ದೇವಾಲಯದ ಪ್ರಧಾನ ಅರ್ಚಕರು ರಥೋತ್ಸವದ ಕೊನೆಯಲ್ಲಿ ವಾಷರ್ಿಕ ಮಳೆಬೆಳೆ-ಆಗುಹೋಗುಗಳ ಕುರಿತು ಹೇಳಿಕೆ (ಕಾಣರ್ಿಕ) ಹೇಳುವ ರೂಢಿ ಇದೆ.
ಈ ಜಾತ್ರೆಯಲ್ಲಿ ಸಮೀಪದ ಹಳ್ಳಿಗಳು ಮತ್ತು ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳೂ ಸೇರಿದಂತೆ ದೂರದ ಕೊಲ್ಲಾಪೂರ, ಗದಗ, ಹಾವೇರಿ, ಬೆಳಗಾವಿ ಜಿಲ್ಲೆಗಳ ಭಕ್ತರು ಆಗಮಿಸಿ ನಂದೀಶ್ವರನ ದರ್ಶನ ಪಡೆಯುವರೆಂದು ಅಮ್ಮಿನಬಾವಿ ಮಂಡಳ ಪಂಚಾಯತಿ ಮಾಜಿ ಪ್ರಧಾನ ಎಂ.ಸಿ. ಹುಲ್ಲೂರ ಹಾಗೂ ಜಿ.ಎಂ. ಹಂಚಿನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 