ತಾಯಿಯ ಎದೆಹಾಲು ಮಗುವಿಗೆ ಅಮೃತ ಸಮಾನ : ಅಲ್ಕಾ ಇನಾಮದಾರ
ಬೆಳಗಾವಿ, 3: ನವಜಾತ ಶಿಶುವಿಗೆ ನಾಳಿನ ಉತ್ತಮ ಜೀವನ ನೀಡುವದಕ್ಕಾಗಿ ಆರೋಗ್ಯಯುತವಾಗಿರಬೇಕು. ಆರೋಗ್ಯ ಶರೀರಕ್ಕೆ ಮಾತ್ರವಲ್ಲ. ಮನಸ್ಸಿಗೂ ಬೇಕು. ಆದ್ದರಿಂದ ಮಗುವಿನ ಸಮಗ್ರ ಬೆಳವಣಿಗೆಗೆ ತಾಯಿಯ ಎದೆಹಾಲು ಅತ್ಯವಶ್ಯ. ತಾಯಿಯ ಎದೆಹಾಲು ಮಗುವಿಗೆ ಅಮೃತ ಸಮಾನ. ಮಗು ಜನಿಸಿದ ತಕ್ಷಣ ಎದೆ ಹಾಲು ಉಣಿಸಿ, ಭವಿಷ್ಯದಲ್ಲಿ ಆರೋಗ್ಯವಂತ ಮಗುವನ್ನು ನಿಮರ್ಾಣಗೊಳಿಸಿ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕಾರಿಣಿ ಸದಸ್ಯೆ ಅಲ್ಕಾ ಇನಾಮದಾರ ಅವರಿಂದಿಲ್ಲಿ ಹೇಳಿದರು.
ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ದಿ. 2 ಅಗಸ್ಟ 2019 ರಂದು ಜೆಎನ್ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಇವುಗಳ ಸಂಯುಕ್ತಾಶ್ರಯದಲ್ಲಿ ಚಿಕ್ಕಮಕ್ಕಳ ವಿಭಾಗವು ಏರ್ಪಡಿಸಿದ್ದ ಸ್ತನಪಾನ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮನೆಯ ಶಾಂತ ವಾತಾವರಣದಲ್ಲಿ ಬೆಳೆಯುವ ಮಗು ಕುಶಾಗ್ರ ಬುದ್ದಿಮತ್ತೆಯಿಂದ ಕೂಡಿರುತ್ತದೆ. ಕೇವಲ ಬಟ್ಟೆ ಬರೆ ಸಾಲದು ಅದಕ್ಕೆ ಒಳ್ಳೆಯ ಆರೋಗ್ಯ ಬೇಕು. ಎದೆಹಾಲು ಉಣಿಸಿದರೆ ಮಗುವಿನ ರೋಗನಿರೋಧಕ ಶಕ್ತಿಯು ಹೆಚ್ಚಾಗುತ್ತದೆ ಎಂದು ತಿಳಿಸಿದರು.
ಸಮಾಜದಲ್ಲಿ ಹೆಣ್ಣು ಗಂಡೆಂಬ ಬೇಧಭಾವ ಮಾಡದೇ ಎಲ್ಲರನ್ನು ಸಮಾನತೆಯಿಂದ ಕಾಣಬೇಕು. ಕಾರ್ಯಸ್ಥಳದ ಒತ್ತಡದ ನಡುವೆ ಮಹಿಳೆಯು ಮಗುವಿನ ಪಾಲನೆ ಮಾಡಬೇಕಾಗುತ್ತದೆ. ಮಗುವಿನ ಭವಿಷ್ಯ ರೂಪಿಸುವಲ್ಲಿ ತಂದೆ ತಾಯಿ ಹಾಗೂ ಮನೆಯ ಸದಸ್ಯರೆಲ್ಲರ ಜವಾಬ್ದಾರಿ ಇರುತ್ತದೆ. ಆದ್ದರಿಂದ ಮನೆಯ ಹಿರಿಯರ ಸಹಕಾರ ಅತ್ಯಗತ್ಯ. ಒಳ್ಳೆಯ ಆಚಾರ ವಿಚಾರ ಆಹಾರ ಸಾಲದು, ಉತ್ತಮ ಸಂಸ್ಕಾರ ಮುಖ್ಯ. ಇದರಿಂದ ಸಮಾಜ ನಿರ್ಮಾಣದಲ್ಲಿ ಮಕ್ಕಳು ತಾವಾಗಿಯೇ ಮುಂದೆ ಬರುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಜೆಎನ್ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎನ್ ಎಸ್ ಮಹಾಂತಶೆಟ್ಟಿ ಮಾತನಾಡಿ, ಬಾಣಂತಿ ಮಹಿಳೆಗೆ ಸರಕಾರದಿಂದ ಸಕಲ ಸೌಲಬ್ಯ ಲಭಿಸುತ್ತದೆ. ಗಭರ್ಿಣಿ ಹಾಗೂ ಪ್ರಸವದ ನಂತರದಲ್ಲಿ ಮಹಿಳೆಯರು ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು. ಕೆಲವು ತಪ್ಪು ಕಲ್ಪನೆಯಿಂದಾಗಿ ಮಹಿಳೆಯರು ನವಜಾತ ಶಿಶುವಿಗೆ ಎದೆಹಾಲು ಉಣಿಸಲು ಹಿಂದೇಟು ಹಾಕುತ್ತಿದ್ದಾರೆ. ಅದು ತಪ್ಪಬೇಕು.ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ಅಮೃತ ಎಂಬ ಹ್ಯುಮನ ಮಿಲ್ಕ (ತಾಯಿ ಎದೆಹಾಲು)ಬ್ಯಾಂಕ ಸ್ಥಾಪಿಸಲಾಗಿದೆ. ಅಲ್ಲಿ ಎದೆಹಾಲನ್ನು ದಾನ ಮಾಡಿ ಎಂದು ಸಲಹೆ ನೀಡಿದರು.
ಕಾಹೆರನ ಕುಲಸಚಿವ ಡಾ. ವಿ.ಡಿ. ಪಾಟೀಲ ಮಾತನಾಡಿದರು. ಸಮಾರಂಭದಲ್ಲಿ ಆಸ್ಪತ್ರೆಯ ವೈದ್ಯಕೀಯ ನಿದರ್ೇಶಕರಾದ ಡಾ. ಎಂ.ವಿ. ಜಾಲಿ, ಡಾ. ರೂಪಾ ಬೆಲ್ಲದ, ಡಾ. ಸುಜಾತಾ ಜಾಲಿ, ಡಾ. ಆರ್. ಎಸ್. ಮುಧೋಳ, ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 