ಅನ್ನ ಭಾಗ್ಯದ ಅಕ್ಕಿ ಹೊರ ರಾಜ್ಯಗಳಿಗೆ ಮಾರಾಟ: ಕೃಷಿ ಕೂಲಿಕಾರ ಸಂಘ ಆರೋಪ
Anna Bhagya rice sold to outside states: Agricultural Workers' Association alleges
ಅನ್ನ ಭಾಗ್ಯದ ಅಕ್ಕಿ ಹೊರ ರಾಜ್ಯಗಳಿಗೆ ಮಾರಾಟ: ಕೃಷಿ ಕೂಲಿಕಾರ ಸಂಘ ಆರೋಪ
ಕೊಪ್ಪಳ 04: ಕೇಂದ್ರ ಮತ್ತುರಾಜ್ಯ ಸರ್ಕಾರ ಬಡವರು ಹಸಿವಿನಂದ ಇರಬಾರದುಎಂದು ಪಡಿತರ ವ್ಯವಸ್ಥೆಯ ಮೂಲಕ ಅಕ್ಕಿಯನ್ನು ಪೂರೈಕೆ ಮಾಡುತ್ತಿದ್ದು, ಇದನ್ನು ಸರ್ಕಾರದ ಅಧಿಕಾರಿಗಳು ಮತ್ತು ವಾಣಿಜ್ಯೋದ್ಯಮಿಗಳು ಸೇರಿಕೊಂಡು ಪಡಿತರಅಕ್ಕಿಯನ್ನು ಕನ್ನ ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾಧಿಕರಿಗೆ ಮನವಿ ಸಲ್ಲಿಸಿದರು. ಗಂಗಾವತಿ ನಗರದ ಕನಕಗಿರಿ ರಸ್ತೆಯಲ್ಲಿನ ಸರ್ಕಾರದ ಗೋದಾಮಿನಲ್ಲಿ ಅಕ್ರಮವಾಗಿ ಪಡಿತರಅಕ್ಕಿಯನ್ನುದಾಸ್ತಾನು ಮಾಡಿ ಸದರಿ ಪಡಿತರಅಕ್ಕಿಯನ್ನು ಹೊರದೇಶಕ್ಕೆ ಸಾಗಾಣಿಕೆ ಮಾಡುವ ಹುನ್ನಾರ ನಡೆದಿರುತ್ತದೆ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಜಿಲ್ಲಾ ಸಮಿತಿ ಕೊಪ್ಪಳ ಮಾದ್ಯಮಕ್ಕೆ ತಿಳಿಸಿದ್ದಾರೆ.
ಇದೆ ರೀತಿಯಾಗಿ ಅಕ್ರಮದಾಸ್ತಾನ ಮಾಡಿದವರ ಮೇಲೆ ಯಾವುದೆಕ್ರಮ ಕೈಗೊಳ್ಳದೆ ಕೇವಲ ಅಧಿಕಾರಿಗಳ ಮೇಲೆ ಕ್ರಮಕೈಗೊಂಡಿದ್ದು ನೋಡಿದರೆ ಇದರಲ್ಲಿ ಸರ್ಕಾರಿ ಅಧಿಕಾರಿಗಳು ಮತ್ತು ಪ್ರಭಾವಿ ವಾಣಿಜ್ಯೋದ್ಯಮಿಗಳು ಕೂಡ ಶಾಮೀಲಾಗಿರುವುದುಕಂಡು ಬರುತ್ತದೆ, ಇದನ್ನು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಜಿಲ್ಲಾ ಸಮಿತಿಖಂಡಿಸುತ್ತದೆ. ಆದ್ದರಿಂದ ಜಿಲ್ಲಾಧಿಕಾರಿಗಳು ಸಮಗ್ರವಾಗಿತನಿಖೆ ಮಾಡಿ, ಅಕ್ರಮವಾಗಿ ಪಡಿತರಅಕ್ಕಿಯನ್ನುದಾಸ್ತಾನ ಮಾಡಿರುವ ವಾಣಿಜ್ಯೋದ್ಯಮಿಗಳನ್ನು ಪತ್ತೆ ಹಚ್ಚಿ ವಾಣಿಜ್ಯೋದ್ಯಮಿಗಳ ಮೇಲೆ ಮತ್ತುಇದಕ್ಕೆ ಸಹಾಯ ಸಹಕಾರ ನೀಡಿದಅಧಿಕಾರಿಗ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 