ವಾರ್ಷಿಕ ಪ್ರಶಸ್ತಿ ವಿತರಣಾ ಕಾರ್ಯಕ್ರಮ
Annual Award Distribution Programme
ವಾರ್ಷಿಕ ಪ್ರಶಸ್ತಿ ವಿತರಣಾ ಕಾರ್ಯಕ್ರಮ
ಕಾರವಾರ, 17; ಎಜ್ಯುಕೇಶನ್ ಸೊಸೈಟಿಯ ಸುಮತಿ ದಾಮ್ಲೆ ಬಾಲಕಿಯರ ಪ್ರೌಢಶಾಲೆಯಲ್ಲಿ “ವಾರ್ಷಿಕ ಪ್ರಶಸ್ತಿ ವಿತರಣಾ ಕಾರ್ಯಕ್ರಮ” ಯಶಸ್ವಿಯಾಗಿ ಜರುಗಿತು.
ಉದ್ಘಾಟಕರಾಗಿ ವಸಂತಲಕ್ಷ್ಮೀ ಎಸ್. ನಾಯ್ಕ, ಸಹಾಯಕ ಅಭಿಯಂತರರು (ವಿದ್ಯುತ್) ನೋಡಲ್ ಅಧಿಕಾರಿಗಳು, ಕೆ.ಪಿ.ಟಿ.ಸಿ.ಎಲ್. ಆಗಮಿಸಿ "ಸೋಲಿನಲ್ಲಿ ಸಹನೆ, ಸಾಧನೆಯಲ್ಲಿ ಸಮಚಿತ್ತತೆ, ನಮ್ಮದಾಗಿಸಿಕೊಳ್ಳಬೇಕು". ಎಂದು ತಮ್ಮ ಅನುಭವಗಳನ್ನು ಹಂಚಿಕೊಂಡರು.
ಮುಖ್ಯ ಅತಿಥಿಗಳಾಗಿ ದೇವಿದಾಸ ವಿಠೋಬಾ ನಾಯ್ಕ ಆಗಮಿಸಿ, "ವಿನಯವು ಪ್ರೀತಿ ಮತ್ತು ಹೃದಯಗಳನ್ನು ಜೋಡಿಸುವ ಸೇತುವೆಯಾಗಿದೆ. ನಾವು ಪ್ರೀತಿ-ನೀತಿಗಳಿಂದ ಬದುಕಿನಲ್ಲಿ ಅಮೂಲ್ಯ ಬೆಳಕು ತುಂಬಲು ಪ್ರಯತ್ನಿಸಬೇಕು". ಎಂದು ತಮ್ಮ ಅನಿಸಿಕೆ ಹಂಚಿಕೊಂಡರು.
ಸಂಸ್ಥೆಯ ಆಡಳಿತಾಧಿಕಾರಿ ಜಿ.ಪಿ. ಕಾಮತ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾಥಿಗಳು ಪ್ರಾರ್ಥಿಸಿದರು. ಮುಖ್ಯಾಧ್ಯಾಪಕಿ ಶ್ರೀಮತಿ ಗಿರಿಜಾ ಎನ್. ಬಂಟ ಸ್ವಾಗತಿಸಿದರು. ಟಿ. ಎಮ್. ಶಮೀಂದ್ರ ಅತಿಥಿ ಪರಿಚಯ ಮಾಡಿದರು. ಮಾಲಿನಿ ಜೆ. ಗುರವ, ಪೂಣಿಮಾ ಮಾಂಜ್ರೇಕರ ಬಹುಮಾನ ವಿತರಣಾ ಕಾರ್ಯಕ್ರಮ ನಿರ್ವಹಿಸಿದರು. ನಾರಾಯಣ ರಾಣೆ ವಂದಿಸಿದರು. ಸಂತೋಷ ಎಂ. ಶೇಟ್ ಕಾರ್ಯಕ್ರಮ ನಿರ್ವಹಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 