ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ
Annual Friendship Conference at Public School
ಕೊಲ್ಹಾರ 08: ತಾಲೂಕಿನ ಕೂಡಗಿ ಗ್ರಾಮದಲ್ಲಿ ಸೋಮವಾರ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಕೆಪಿಎಸ್ ಮಕ್ಕಳ ಉತ್ಸವ ಮತ್ತು ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಾಂತಪ್ಪ ತೊರವಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರುಪ್ರತಿಯೊಬ್ಬ ವಿದ್ಯಾರ್ಥಿಯು ಗುಣಮಟ್ಟದ ಶಿಕ್ಷಣ ಪಡೆದರೆ ಮಾತ್ರ ಸಮಾಜ ಮತ್ತು ವ್ಯಕ್ತಿಯ ಬದುಕಿನಲ್ಲಿ ಪ್ರಗತಿ ಸಾಧಿಸಲು ಸಾಧ್ಯವಿದೆ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಶಿಕ್ಷಣ ಅವಶ್ಯ ಶಿಕ್ಷಕಿ ಪ್ರತಿಭಾ ತೊರವಿ ಮಾತನಾಡಿ, ’ಸರ್ಕಾರಿ ನೌಕರಿ ಎಲ್ಲರಿಗೂ ಸಿಗುವುದು ಕಷ್ಟ. ಆದರೆ, ನಿಮ್ಮಲ್ಲಿ ಜ್ಞಾನ, ಕೌಶಲ್ಯ, ಶ್ರದ್ಧೆ ಹಾಗೂ ಶಿಸ್ತು ಇದ್ದರೆ ನೀವೂ ಯಾವದೇ ಕ್ಷೇತ್ರದಲ್ಲಿ ಸಾಧನೆ ಮಾಡಿ ಸ್ವಾವಲಂಬಿಗಳಾಗಿ ಬದುಕು ರೂಪಿಸಿಕೊಳ್ಳಲು ಸಾಧ್ಯವಿದೆ’ ಎಂದು ಕಿವಿಮಾತು ಹೇಳಿದರು.
ಶಿಕ್ಷಕರಾದ ಹಸನ್ ಎಡಿಗೇರಿ ಮಾತನಾಡಿ ಪ್ರತಿ ವಿದ್ಯಾರ್ಥಿಯ ಪಾಲಕರು ಮಕ್ಕಳನ್ನು ಬಹಳ ಜಾಗೃತೆಯಿಂದ, ಮೊಬೈಲ್ ನಿಂದ ದೂರ ಇಟ್ಟು ಓದಿಸಬೇಕು ನಿಮ್ಮ ನಿಮ್ಮ ಮಕ್ಕಳ ಜವಾಬ್ದಾರಿ ಶಿಕ್ಷಕರ ಜೊತೆಗೆ ಹೆಚ್ಚಿಗೆ ನಿಮಗೆ ಇರುತ್ತದೆ ಎಂದು ಪಾಲಕರನ್ನು ಉದ್ದೇಶಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಾಲೆಯ ಮುಖ್ಯ ಗುರುಗಳಾದ ಎ ಎಚ್ ಹೊರ್ತಿ ಮಾತನಾಡಿಇಂದಿನ ಮಕ್ಕಳು ನಾಳಿನ ಭವಿಷ್ಯದ ಉಜ್ವಲ ನಕ್ಷತ್ರಗಳಾಗ ಬೇಕು. ಕಲಿತ ಶಾಲೆಗೆ ಹೆತ್ತವರಿಗೆ ಹೆಸರು ತರುವ ಮಕ್ಕಳು ನೀವಾಗ ಬೇಕೆಂದು, ನೀವು ಶಿಕ್ಷಣ ಪಡೆದ ಶಾಲೆಗೆ ಮುಂದೊಂದು ದಿನ ವಿಶೇಷ ಅತಿಥಿಯಾಗಿ ಆಗಮಿಸಬೇಕು ಎಂದರುಕಾರ್ಯಕ್ರಮದಲ್ಲಿ ಗಂಗಾಧರಯ್ಯ ಹಿರೇಮಠ,ಸಾಹೇಬಗೌಡ ಪಾಟೀಲ,ಭರಮಣ್ಣ ಬಿದರಿ, ಶ್ರೀಶೈಲ ಗೊಗಿಹಾಳ, ಕಾಶಿಬಾಯಿ ಉಳ್ಳಾಗಡ್ಡಿ ಅನ್ನಪೂರ್ಣ ಮಠಪತಿ, ಕಮಲಾ ಶಿಲ್ಪಿ,ಮುತ್ತು ಮಂಕಣಿ ಸೇರಿದಂತೆ ಶಾಲೆಯ ಶಿಕ್ಷಕರು ,ಸದಸ್ಯರು, ವಿದ್ಯಾರ್ಥಿನಿಯರು ,ಉಪಸ್ಥಿತರಿದ್ದರು
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 