74 ದಿನದ ಹೋರಾಟ ಪೂರೈಸಿದ ಕಾರ್ಖಾನೆ ವಿರೋಧಿ ಧರಣಿ ಸತ್ಯಾಗ್ರಹ ಇಂದು ವಜ್ರ ಮಹೋತ್ಸವಕ್ಕೆ ಕೆ.ಎಸ್. ಭಗವಾನ್ ಆಗಮನ
Anti-factory sit-in protest completes 74 days, K.S. Bhagwan arrives for Diamond Jubilee today
ಕೊಪ್ಪಳ 12 : ನಗರಸಭೆ ಮುಂದುಗಡೆ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತ ರಕ್ಷಣಾ ವೇದಿಕೆಯ ಜಂಟಿ ಕ್ರಿಯಾ ವೇದಿಕೆ ಮೂಲಕ ಹಮ್ಮಿಕೊಂಡಿರುವ ಬಲ್ಡೋಟಾ, ಕಿರ್ಲೋಸ್ಕರ್, ಕಲ್ಯಾಣಿ, ಮುಕುಂದ್ ಸುಮಿ, ಎಕ್ಸ್ ಇಂಡಿಯಾ, ತನುಷ್, ದೃವದೇಶ ಸೇರಿದಂತೆ ಅನೇಕ ಪರಿಸರ ಮಾರಕ ಕಾರ್ಖಾನೆ ವಿರೋಧಿ ಅನಿರ್ದಿಷ್ಟವಾದಿ ಧರಣಿ ಸತ್ಯಾಗ್ರಹ 74 ದಿನ ಪೂರೈಸಿತು.
ಜನರು ಅನೇಕ ರೋಗಗಳಿಂದ ಬಳಲುತ್ತಿದ್ದು ಕೂಡಲೇ ಎಚ್ಚೆತ್ತುಕೊಂಡು ಹೋರಾಟಕ್ಕೆ ಬರುವಂತೆ ಕರೆ ನಿಡಿದರು. ಧರಣಿಯಲ್ಲಿ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದದೂರು, ಪ್ರಕಾಶಕ ಡಿ.ಎಂ. ಬಡಿಗೇರ, ಎಸ್. ಬಿ. ರಾಜೂರ, ಸಂಚಾಲಕರಾದ ಮಲ್ಲಿಕಾರ್ಜುನ ಬಿ. ಗೋನಾಳ, ಮಹಾದೇವಪ್ಪ ಎಸ್. ಮಾವಿನಮಡು, ಮಖ್ಬುಲ್ ರಾಯಚೂರು, ದಾದಾ ಖಲಂದರ್, ವಿಜಯಮಹಾಂತೇಶ ಬಿ. ಹಟ್ಟಿ, ರಾಮಣ್ಣ ರು. ಬಡಿಗೇರ, ಸದಾಶಿವ ಪಾಟೀಲ್, ಶಿವಪ್ಪ ಜಲ್ಲಿ, ಜಾಫರ್ ತಟ್ಟಿ, ಚನ್ನವೀರಯ್ಯ ಹಿರೇಮಠ, ಶೌಕತ್ ಅಲಿ ನಾಗನೂರು, ಜಿ.ಎಸ್. ಕಡೇಮನಿ ಇತರರು ಪಾಲ್ಗೊಂಡರು.
ನಾಳೆ ಮಂಗಳವಾರ 75ನೇ ದಿನದ ಕಾರ್ಖಾನೆ ವಿರೋಧಿ ಧರಣಿಯ ವಜ್ರ ಮಹೋತ್ಸವವನ್ನು ಬೆಂಬಲಿಸಲು ರಾಜ್ಯದ ಖ್ಯಾತ ವಿದ್ವಾಂಸರಾದ ಕೆ. ಎಸ್. ಭಗವಾನ್ ಅವರು ಆಗಮಿಸುತ್ತಿದ್ದಾರೆ. ಬೆಳಿಗ್ಗೆ ಕೊಪ್ಪಳ ಕಾರ್ಖಾನೆ ಬಾಧಿತ ಗಿಣಿಗೇರಿ, ಹಿರೇಬಗನಾಳ, ಚಿಕ್ಕಬಗನಾಳ, ಕುಣಿಕೇರಿ, ಕುಣಿಕೇರಿ ತಾಂಡಾ, ಹಾಲವರ್ತಿ ಗ್ರಾಮಗಳ ಜನರನ್ನು ಕಂಡು ಸಮಸ್ಯೆ ಕುರಿತು ಸಮಾಲೋಚನೆ ನಡೆಸುತ್ತಾರೆ. ನಂತರ ಧರಣಿ ಸ್ಥಳಕ್ಕೆ ಬಂದು 75ನೇ ವಜ್ರ ಮಹೋತ್ಸವ ಹೋರಾಟದಲ್ಲಿ ಪಾಲ್ಗೊಂಡು ಮಾತನಾಡುವರು ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟಗಾರರು, ಕೊಪ್ಪಳ ಉಳಿಸುವ ಹಂಬಲ ಇರುವ ಜನರು ಪಾಲ್ಗೊಳ್ಳಲು ಜಂಟಿ ಕ್ರಿಯಾ ವೇದಿಕೆ ಮನವಿ ಮಾಡಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 