ಶ್ರೀ ಮಾರಿಕಾಂಬಾ ಜಾತ್ರೆ ವೇಳೆ ಪ್ರತಿದಿನ ನೀರು ಪೂರೈಕೆಗೆ ಮನವಿ
Appeal for daily water supply during Sri Marikamba fair
ಮುಂಡಗೋಡ 18 : ಪಟ್ಟಣದ ಹಳೂರ ಓಣಿಯಲ್ಲಿ ಫೆಬ್ರವರಿ 3ರಿಂದ 11ರವರೆಗೆ ನಡೆಯಲಿರುವ ಶ್ರೀ ಮಾರಿಕಾಂಬಾ (ದ್ಯಾಮವ್ವ) ದೇವಿಯ ಜಾತ್ರೆಯ ಸಂದರ್ಭದಲ್ಲಿ ಪ್ರತಿದಿನ ಕುಡಿಯುವ ನೀರು ಪೂರೈಕೆ ಮಾಡುವಂತೆ ಒಕ್ಕೂಟದ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಕಲಾಲ ಅವರು ಪಟ್ಟಣ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಒಟ್ಟು 9 ದಿನಗಳ ಕಾಲ ನಡೆಯಲಿರುವ ಜಾತ್ರೆಗೆ ರಾಜ್ಯದ 31 ಜಿಲ್ಲೆಗಳಿಂದ ಸಾವಿರಾರು ಭಕ್ತಾದಿಗಳು ಆಗಮಿಸಲಿದ್ದಾರೆ. ಸದ್ಯ ಮೂರು ದಿನಕ್ಕೊಮ್ಮೆ ಮಾತ್ರ ನೀರು ಪೂರೈಕೆ ಮಾಡಲಾಗುತ್ತಿದ್ದು, ಜಾತ್ರೆ ಅವಧಿಯಲ್ಲಿ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇದೆ ಎಂದು ಅವರು ಮನವಿಯಲ್ಲಿ ತಿಳಿಸಿದರು. ಭಕ್ತಾದಿಗಳು ಹಾಗೂ ಸ್ಥಳೀಯ ನಿವಾಸಿಗಳ ಅನುಕೂಲಕ್ಕಾಗಿ ಜಾತ್ರೆ ಆರಂಭದಿಂದ ಮುಕ್ತಾಯದವರೆಗೆ ಪ್ರತಿದಿನ ನಿರಂತರವಾಗಿ ಕುಡಿಯುವ ನೀರು ಸರಬರಾಜು ಮಾಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 