ಮುಂಡಗೋಡ ಕೆಎಸ್ಆರ್ಟಿಸಿ ಬಸ್ ಘಟಕ ಅಭಿವೃದ್ಧಿಗೆ ಮನವಿ
Appeal for development of Mundagoda KSRTC bus unit
ಮುಂಡಗೋಡ 30: ಮುಂಡಗೋಡ ಕೆಎಸ್ಆರ್ಟಿಸಿ ಬಸ್ ಘಟಕವನ್ನು ಅಭಿವೃದ್ಧಿಪಡಿಸಿ ಅಗತ್ಯ ಮೂಲಸೌಕರ್ಯ ಒದಗಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಸೇನೆ ಮುಂಡಗೋಡ ತಾಲೂಕ ಘಟಕದಿಂದ ಸಾರಿಗೆ ಸಚಿವರಿಗೆ ಮನವಿ ಸಲ್ಲಿಸಲಾಯಿತು. ತಾಲೂಕ ಅಧ್ಯಕ್ಷ ಜಗದೀಶ್ ದೈವಜ್ಞ ಅವರ ನೇತೃತ್ವದಲ್ಲಿ ತಹಶೀಲ್ದಾರ ಜಿ.ಬಿ. ಭಟ್ ಅವರ ಮೂಲಕ ಮನವಿ ನೀಡಲಾಯಿತು. ಬಸ್ ಘಟಕದ ಆವರಣವನ್ನು ಕಾಂಕ್ರೀಟೀಕರಣ ಗೊಳಿಸುವುದು, ಡಿಪೋಗೆ ಹೊಸ ಬಸ್ಸುಗಳನ್ನು ಒದಗಿಸುವುದು, ಹಳೆಯ ಬಸ್ಸುಗಳಿಂದ ಉಂಟಾಗುತ್ತಿರುವ ಸಂಚಾರ ವ್ಯತ್ಯಯ ನಿವಾರಣೆ, ನಿಲ್ದಾಣಕ್ಕೆ ಅಗತ್ಯ ಸಿಬ್ಬಂದಿ ನೇಮಕ ಹಾಗೂ ಶೌಚಾಲಯಗಳ ಸಮಸ್ಯೆಗಳಿಗೆ ತ್ವರಿತ ಪರಿಹಾರ ನೀಡಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಸೇನೆ ಜಿಲ್ಲಾಧ್ಯಕ್ಷರು ಜಗದೀಶ್ ದೈವಜ್ಞ, ದುರ್ಗಪ್ಪ ಭೋವಿ, ವಿರುಪಾಕ್ಷಿ ಸಾಗರ, ಬಸವರಾಜ ಗೌಳಿ, ಪ್ರಕಾಶ್ , ರಾಮಣ್ಣ ಗೌಳಿ, ಅರುಣ್ , ಮಾರುತಿ ಭೋವಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 