ಮೆಕ್ಕೆಜೋಳ ಜಿಲ್ಲೆಗಳಲ್ಲಿಯೇ ಖರೀದಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ
Appeal to District Collectors demanding that maize be purchased in the districts themselves
ವಿಜಯಪುರ, 04 : ಮೆಕ್ಕೆಜೋಳ ಖರೀದಿಗೆ ವಿಧಿಸಿದ ಮಾನದಂಡ ರದ್ದುಪಡಿಸಿ ಜಿಲ್ಲೆಗಳಲ್ಲಿಯೇ ಖರೀದಿಸಬೇಕೆಂದು ಒತ್ತಾಯಿಸಿ ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ಅವರಿಗೆ ಅಖಂಡ ಕರ್ನಾಟಕ ರೈತ ಸಂಘ (ರಿ) ವಿಜಯಪುರ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ರೈತರು ಬೆಳೆದ ಮೆಕ್ಕೆಜೋಳ ಖರೀದಿಸಲು ಸರ್ಕಾರದ ಹಲವಾರು ಮಾನದಂಡಗಳನ್ನು ವಿಧಿಸುವ ಮೂಲಕ ರೈತರ ಬದುಕನ್ನು ಬೀದಿಗೆ ತರಲು ಹೊರಟಿದೆ. ಆಯಾ ಜಿಲ್ಲೆಯ ವ್ಯಾಪ್ತಿಯ ಪ್ರತಿಯೊಂದು ಪಿಕೆಪಿಎಸ್ ಗೆ ನೀಡಿ ಅಲ್ಲಿಯೇ ಮೆಕ್ಕೆ ಜೋಳ ಖರೀದಿಸಬೇಕು. ಅದನ್ನು ಬಿಟ್ಟು ಧಾರವಾಡದಲ್ಲಿ ಖರೀದಿಸಲು ಸರ್ಕಾರ ನಿರ್ಧರಿಸುವುದು ಇದು ಸಂಪೂರ್ಣ ರೈತ ವಿರೋಧಿಯಾಗಿದೆ.
ಅದೂ ಅಲ್ಲದೇ ಮಾರಾಟ ಮಾಡುವ ಮೊದಲು ರೈತರಿಂದ ಮೆಕ್ಕೆಜೋಳ ಮಾದರಿ ಪರಿಷ್ಕರಣೆಗಾಗಿ ಪ್ರತಿಯೊಬ್ಬ ರೈತನಿಂದ ಒಂದು ಕೆ.ಜಿ. ಮೆಕ್ಕೆಜೋಳವನ್ನು ಧಾರವಾಡಕ್ಕೆ ಕಳುಹಿಸಲು ಕೆಎಂಎಫ್ ಅಧಿಕಾರಗಳ ಮುಖಾಂತರ ಧಾರವಾಡಕ್ಕೆ ತೆಗೆದುಕೊಂಡು ಹೋಗಿ ಟೆಸ್ಟ್ ಮಾಡಿಸಿ ನಂತರ ಗುಣಮಟ್ಟದ ಮೆಕ್ಕೆಜೋಳ ಇವೆ ಎಂದು ತಿಳಿದು ಬಂದಾಗಮಾತ್ರ ರೈತರಿಂದ ಖರೀದಿಸಲು ಸರ್ಕಾರ ತೀರ್ಮಾನಿಸಿದೆ ಅದೂ ಅಲ್ಲದೆ ಪ್ರತಿ ರೈತನಿಂದ 20 ಕ್ವಿಂಟಲ್ ಮೆಕ್ಕೆಜೋಳ ಖರೀದಿಸುವದೆಂದು ಸರ್ಕಾರ ಹೇಳಿರುವುದು ಸರಿಯಾದ ಕ್ರಮವಲ್ಲ. ಮತ್ತು ಮೆಕ್ಕೆಜೋಳವನ್ನು ಧಾರವಾಡದಲ್ಲಿಯೇ ಖರೀದಿಸುವುದನ್ನು ಕೆ.ಎಂ.ಎಸ್. ಅಡಿ ತೆಗೆದುಕೊಳ್ಳಲಾಗುವುದೆಂದು ಹೇಳಲಾಗಿದೆ.
ರೈತರು ಧಾರವಾಡಕ್ಕೆ ಮೆಕ್ಕೆಜೋಳ ತೆಗೆದುಕೊಂಡು ಹೋಗುವುದೆಂದರೆ ರೈತರಿಗೆ ಎಷ್ಟು ತೊಂದರೆಯಾಗುತ್ತದೆ ಎಂಬುದು ಸರ್ಕಾರಕ್ಕೆ ಅರವಿಲ್ಲದಂತಾಗಿದೆ ವಾಹನ ಬಾಡಿಗೆಗೆ ಸಾವಿರಾರು ಹಣ ಖರ್ಚಾಮಾಡುವುದು ರೈತರಿಗೆ ಸಾಧ್ಯವೇ ಹೇಗೆ? ಮೊದಲೇ ತೊಗರಿ ಬೆಳೆ ಹಾಳಾಗಿ ತೀವ್ರ ಸಂಕಷ್ಟದಲ್ಲಿರುವ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಮಾಡಿದೆ ಸರ್ಕಾರದ ಈ ನಿರ್ಣಯವನ್ನು ಕೈಬಿಟ್ಟು ಆಯಾ ಜಿಲ್ಲೆಯ ಪ್ರತಿ ಪಿಕೆಪಿಎಸ್ ನಲ್ಲಿ ಖರೀದಿಸುವಂತಾಗಬೇಕು. ಮತ್ತು ರೈತರು ಬೆಳೆದಂತ ಎಲ್ಲ ಮೆಕ್ಕೆಜೋಳ ಅಂದರೆ ಎಷ್ಟು ಬೆಳೆದಿದ್ದಾರೆ ಎಲ್ಲವನ್ನು ಖರೀದಿಸಲು ಸರ್ಕಾರ ಮಂದಾಗಬೇಕೆಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಮದ ಕುಲಕರ್ಣಿ ಸರ್ಕಾರಕ್ಕೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸದಾಶಿವ ಬಟರಗಿ, ಹೊನ್ನಪ್ಪ ಗೋಟ್ಯಾಳ, ಶಿವು ಬಿರಾದಾರ, ಲಕ್ಷ್ಮಣ ಕುಂಬಾರ, ಜಗನ್ನಾಥ ಮಸರಕಲ್ಲ, ಶಿವರಾಜ ಡೋರಗಿಹಳ್ಳಿ, ಗುರು ಕೋಟ್ಯಾಳ, ಮಲ್ಲು ಕೊಕಟನೂರ, ಬಾಗೇವಾಡಿ ತಾಲೂಕಾ ಪ್ರಧಾನ ಕಾರ್ಯದರ್ಶಿ ಪ್ರಹ್ವಾಲದ ನಾಗರಾಳ, ಬಸವನ ಬಾಗೇವಾಡಿ ಉಪಾಧ್ಯಕ್ಷ ಹೊನಕರೇರ್ಪ ತೆಲಗಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 