ಗರಡಿಮನೆ ನಿರ್ಮಾಣಕ್ಕೆ ಆಗ್ರಹಿಸಿ ಪಿಡಿಓಗೆ ಮನವಿ.
Appeal to PDO demanding construction of a guard house
ಗರಡಿಮನೆ ನಿರ್ಮಾಣಕ್ಕೆ ಆಗ್ರಹಿಸಿ ಪಿಡಿಓಗೆ ಮನವಿ.
ಬಾಗಲಕೋಟೆ 05: ಚಿಮ್ಮಡ ಗ್ರಾಮದ ಭೀಮನಗರದಲ್ಲಿ ಸುಸಜ್ಜಿದ ನೂತನಗರಡಿ ಮನೆ ನಿರ್ಮಿಸಬೇಕೆಂದು ಆಗ್ರಹಿಸಿ ಡಾ. ಬಿ.ಆರ್.ಅಂಬೇಡ್ಕರ್ ಗ್ರಾಮೀಣಾಭಿವೃದ್ದಿ ಸಂಸ್ಥೆಯ ಪದಾಧಿಕಾರಿಗಳು ಇಲ್ಲಿನಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳಿಗೆ ಶುಕ್ರವಾರ ಮನವಿ ನೀಡಿ ಒತ್ತಾಯಿಸಿದ್ದಾರೆ. ಇಲ್ಲಿನ ಪಿಡಿಓ ರವರು ವಾರ್ಡ ಸಂಖ್ಯೆ 9ರ ಆಸ್ತಿಸಂಖ್ಯೆ 918/4/1 ರಲ್ಲಿ ಗರಡಿಮನೆ ನಿರ್ಮಿಸುವುದಾಗಿ ಧ್ರಡಿಕರಣ ಪ್ರಮಾಣ ಪತ್ರ ನೀಡಿದ್ದಾರೆ. ಅದರನ್ವಯ ಬಾಗಲಕೋಟೆಯ ಪಿಆರ್ಇಡಿಯಿಂದ ಸಾರ್ವಜನಿಕ ಗರಡಿಮನೆ ನಿರ್ಮಾಣಕ್ಕೆ ಹತ್ತು ಲಕ್ಷರೂ.ಗಳ ಅನುದಾನವು ಈಗಾಗಲೇ ಬಿಡುಗಡೆಯಾಗಿದ್ದು ಕಾಮಗಾರಿ ಪ್ರಾರಂಭಿಸಲು ವಿಳಂಬಧೋರಣೆ ಅನುಸರಿಸದೆ ಕೂಡಲೆ ಪ್ರಾರಂಭಿಸಬೇಕೆಂದು ಭೀಮಶಿ ದೊಡವಾಡ, ತೇರದಾಳ ಮತಕ್ಷೇತ್ರದ ಯೂಥಕಾಂಗ್ರೆಸ್ ಅಧ್ಯಕ್ಷ ಪ್ರವೀಣ ಅಶೋಕ ಪೂಜಾರಿ, ಶಿಕ್ಷಕ ಯಲ್ಲಪ್ಪ ಬಜಂತ್ರಿ ಸೇರಿದಂತೆ ಹಲವಾರು ಜನಯುವಕರು ಒತ್ತಾಯಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 