ದ್ವೇಷ ಭಾಷಣ ಮಸೂದೆಯನ್ನು ವಾಪಸ ತೆಗೆದುಕೊಳ್ಳಲು ಆಗ್ರಹಿಸಿ ತಹಸೀಲ್ದಾರರಿಗೆ ಮನವಿ
Appeal to Tehsildars demanding withdrawal of hate speech bill
ರಾಯಬಾಗ 24: ರಾಜ್ಯ ಕಾಂಗ್ರೆಸ್ ಸರ್ಕಾರ ಇತ್ತೀಚಿಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಅಂಗೀಕರಿಸಿದ ದ್ವೇಷ ಭಾಷಣ ಮಸೂದೆಯನ್ನು ವಾಪಸ ತೆಗೆದುಕೊಳ್ಳಲು ಆಗ್ರಹಿಸಿ ಬುಧವಾರ ಬಿಜೆಪಿ ಶಾಸಕ ಡಿ.ಎಮ್.ಐಹೊಳೆಯವರ ನೇತೃತ್ವದಲ್ಲಿ ತಹಸೀಲ್ದಾರ ಮಹಾದೇವ ಸನಮುರಿ ಅವರಿಗೆ ಮನವಿ ಸಲ್ಲಿಸಲಾಯಿತು. ನಂತರ ಮಾತನಾಡಿದ ಶಾಸಕರು, ದ್ವೇಷ ಭಾಷಣ ಮಸೂದೆ ಕುರಿತು ವಿಧಾನ ಸಭೆಯಲ್ಲಿ ಚರ್ಚಿಸಲು ಸರಿಯಾಗಿ ಅವಕಾಶ ನೀಡದೆ,
ತರಾತುರಿಯಲ್ಲಿ ಕಾಂಗ್ರೆಸ್ ಸರ್ಕಾರ ಮಸೂದೆಯನ್ನು ಅಂಗೀಕರಿಸಿದೆ. ಎಮರ್ಜೆನ್ಸಿ ಜಾರಿಗೆ ತಂದ ಕಾಂಗ್ರೆಸ್ ಈಗ ಮತ್ತೊಂದು ಬಾರಿ ಅಂತಹದೇ ಪ್ರಯತ್ನಕ್ಕೆ ಮುಂದಾಗಿದೆ. ಈ ಬಿಲ್ ಅಂಗೀಕರಿಸಿರುವುದು ವಾಕ್ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಿದಂತೆ ಆಗಿದೆ ಎಂದರು.ಬಿಜೆಪಿ ರಾಯಬಾಗ ಮಂಡಲ ಅಧ್ಯಕ್ಷ ಪೃಥ್ವಿರಾಜ ಜಾಧವ, ಸದಾಶಿವ ಘೋರೆ್ಡ, ಬಸವರಾಜ ದೋಣವಾಡೆ, ಸಂಗಣ್ಣ ದತ್ತವಾಡೆ, ಮಹೇಶ ಕರಮಡಿ, ರಂಜಾನ ಮಕಾನದಾರ, ಬೋಲಾ ಕಡಾಳೆ, ಸುಭಾಷ ಕಾಂಬಳೆ, ಭಾರತಿ ಲೋಹಾರ ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 