ದ್ವೇಷ ಭಾಷಣ ಮಸೂದೆಯನ್ನು ವಾಪಸ ತೆಗೆದುಕೊಳ್ಳಲು ಆಗ್ರಹಿಸಿ ತಹಸೀಲ್ದಾರರಿಗೆ ಮನವಿ
Appeal to Tehsildars demanding withdrawal of hate speech bill
ರಾಯಬಾಗ 24: ರಾಜ್ಯ ಕಾಂಗ್ರೆಸ್ ಸರ್ಕಾರ ಇತ್ತೀಚಿಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಅಂಗೀಕರಿಸಿದ ದ್ವೇಷ ಭಾಷಣ ಮಸೂದೆಯನ್ನು ವಾಪಸ ತೆಗೆದುಕೊಳ್ಳಲು ಆಗ್ರಹಿಸಿ ಬುಧವಾರ ಬಿಜೆಪಿ ಶಾಸಕ ಡಿ.ಎಮ್.ಐಹೊಳೆಯವರ ನೇತೃತ್ವದಲ್ಲಿ ತಹಸೀಲ್ದಾರ ಮಹಾದೇವ ಸನಮುರಿ ಅವರಿಗೆ ಮನವಿ ಸಲ್ಲಿಸಲಾಯಿತು. ನಂತರ ಮಾತನಾಡಿದ ಶಾಸಕರು, ದ್ವೇಷ ಭಾಷಣ ಮಸೂದೆ ಕುರಿತು ವಿಧಾನ ಸಭೆಯಲ್ಲಿ ಚರ್ಚಿಸಲು ಸರಿಯಾಗಿ ಅವಕಾಶ ನೀಡದೆ,
ತರಾತುರಿಯಲ್ಲಿ ಕಾಂಗ್ರೆಸ್ ಸರ್ಕಾರ ಮಸೂದೆಯನ್ನು ಅಂಗೀಕರಿಸಿದೆ. ಎಮರ್ಜೆನ್ಸಿ ಜಾರಿಗೆ ತಂದ ಕಾಂಗ್ರೆಸ್ ಈಗ ಮತ್ತೊಂದು ಬಾರಿ ಅಂತಹದೇ ಪ್ರಯತ್ನಕ್ಕೆ ಮುಂದಾಗಿದೆ. ಈ ಬಿಲ್ ಅಂಗೀಕರಿಸಿರುವುದು ವಾಕ್ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಿದಂತೆ ಆಗಿದೆ ಎಂದರು.ಬಿಜೆಪಿ ರಾಯಬಾಗ ಮಂಡಲ ಅಧ್ಯಕ್ಷ ಪೃಥ್ವಿರಾಜ ಜಾಧವ, ಸದಾಶಿವ ಘೋರೆ್ಡ, ಬಸವರಾಜ ದೋಣವಾಡೆ, ಸಂಗಣ್ಣ ದತ್ತವಾಡೆ, ಮಹೇಶ ಕರಮಡಿ, ರಂಜಾನ ಮಕಾನದಾರ, ಬೋಲಾ ಕಡಾಳೆ, ಸುಭಾಷ ಕಾಂಬಳೆ, ಭಾರತಿ ಲೋಹಾರ ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 