ಜಿಲ್ಲಾಧಿಕಾರಿಗಳಿಗೆ ಮನವಿ
Appeal to the District Collector
ಜಿಲ್ಲಾಧಿಕಾರಿಗಳಿಗೆ ಮನವಿ
ಧಾರವಾಡ 24: ಫೆಬ್ರವರಿ 3 ಹಾಗೂ 4 ರಂದು ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಜರುಗಿದ 17 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ದಲ್ಲಿ ತೆಗೆದುಕೊಂಡ ನಿರ್ಣಯಗಳ ಪ್ರತಿಯನ್ನು ಇಂದು ಬೆಳಗ್ಗೆ ಜಿಲ್ಲಾಧಿಕಾರಿಗಳಿಗೆ ಸಮ್ಮೇಳನದ ಸರ್ವಾದ್ಯಕ್ಷರಾದ ಮಾನ್ಯ ಡಾ. ಎಸ್ ಆರ್ ಗುಂಜಾಳ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ನ್ಯಾಯಾಧೀಶರಾದ ಎಸ್ ಎಚ್ ಮಿಟ್ಟಲಕೋಡ, ಡಾ. ವೀರಣ್ಣ ರಾಜೂರ, ಪ್ರೊ. ಕೆ ಎಸ್ ಕೌಜಲಗಿ, ಡಾ. ಜಿನದತ್ ಹಡಗಲಿ, ಎಮ್ ಎಮ್ ಚಿಕ್ಕಮಠ, ಶಂಕರ ಕುಂಬಿ, ಶಾಂತವೀರ ಬೆಟಗೇರಿ, ಚನ್ನಬಸಪ್ಪ ಧಾರವಾಡ ಶೆಟ್ಟರ್, ಎಮ್ ಎಸ್ ನರೇಗಲ್, ಎಸ್ ಎಮ್ ದಾನಪ್ಪಗೌಡರ, ಬಿ ಜಿ ಬಾರ್ಕಿ, ಸಿ ಎಮ್ ಕೆಂಗಾರ, ಆರ್ ಎಮ್ ಹೊನ್ನಪ್ಪನವರ, ಗುರು ತಿಗಡಿ,ಡಾ . ಎಸ್ ಎಸ್ ದೊಡಮನಿ. ಪ್ರಮೀಳಾ ಜಕ್ಕನ್ನವರ, ಸುನಂದಾ ಯಡಾಲ, ಸುಮಂಗಲಾ ದಂಡಿನ, ಶಿವು ಕನ್ನೂರ, ಬಸವಣ್ಣೆಪ್ಪ ಗೆದ್ದಕೇರಿ ಮೊದಲಾದವರು ಮನವಿಯನ್ನು ಅರ್ಿಸುವ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮನವಿ ಸ್ವೀಕರಿಸಿದ ಕಂದಾಯ ಅಧಿಕಾರಿ ಮಲ್ಲಿಕಾರ್ಜುನ ಸೊಲಗಿ ಅವರು ಪ್ರಸ್ತುತ ವಿಷಯವನ್ನು ಮಾನ್ಯ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ತಮ್ಮ ಮನವಿ ಪ್ರತಿಯನ್ನು ಸರ್ಕಾರಕ್ಕೆ ಕಳುಹಿಸಿ ಕೊಡಲಾಗುವುದು ಎಂದು ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 