ತುಂತುರು ನೀರಾವರಿ ಸೌಲಭ್ಯಕ್ಕೆ ರೈತರಿಂದ ಅರ್ಜಿ ಆಹ್ವಾನ
Applications invited from farmers for sprinkler irrigation facilities
ಬ್ಯಾಡಗಿ 01: ಪ್ರಸಕ್ತ 2025-26 ನೇ ಸಾಲಿನ ಸೂಕ್ಷ್ಮ ನೀರಾವರಿ ಯೋಜನೆಯಡಿ ಕೃಷಿ ಇಲಾಖೆ ವತಿಯಿಂದ ತುಂತುರು ನೀರಾವರಿ ಘಟಕ (ಸ್ಪ್ರಿಂಕ್ಲರ್) ಸೌಲಭ್ಯಕ್ಕೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರು ಈಗಾಗಲೇ ಒಂದು ಹೆಕ್ಟೇರ್ ಪ್ರದೇಶಕ್ಕೆ (ಒಂದು ಎಕರೆ ಮೇಲ್ಪಟ್ಟು 2 ಎಕರೆ 20 ಗುಂಟೆ ಒಳಗೆ) ತುಂತುರು ನೀರಾವರಿ ಘಟಕ ಸವಲತ್ತು ಪಡೆದಿದ್ದಲ್ಲಿ, 2 ಎಕರೆ 20 ಗುಂಟೆಯಿಂದ 5 ಎಕರೆವರೆಗಿನ ಹೆಚ್ಚುವರಿ ವಿಸ್ತೀರ್ಣಕ್ಕೆ ಮತ್ತೊಮ್ಮೆ ಸ್ಪ್ರಿಂಕ್ಲರ್ ಸೌಲಭ್ಯ ಪಡೆಯಬಹುದು. ಅರ್ಹ ರೈತರು ತಮ್ಮ ಆಧಾರ್ ಕಾರ್ಡ, ಖಆ ನಂಬರ್ ಣಠಿಜಚಿಣಜ ಇರುವ ಜಾತಿ ಪ್ರಮಾಣ ಪತ್ರ, ಅ ಖಾತೆ ಉತಾರ, ಆರ್ ಟಿ ಸಿ, ಬೆಳೆ ಹಾಗೂ ನೀರಾವರಿ ಮೂಲದ ದೃಡೀಕರಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ನಕಲು ಪ್ರತಿ ಹಾಗೂ 3 ಪಾಸ್ ಪೋರ್ಟ್ ಸೈಜಿನ ಫೋಟೋದೊಂದಿಗೆ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಬ್ಯಾಡಗಿ/ಕಾಗಿನೆಲೆ ಕಚೇರಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಗಣೇಶ್ ಕಮ್ಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 