ತುಂತುರು ನೀರಾವರಿ ಸೌಲಭ್ಯಕ್ಕೆ ರೈತರಿಂದ ಅರ್ಜಿ ಆಹ್ವಾನ
Applications invited from farmers for sprinkler irrigation facilities
ಬ್ಯಾಡಗಿ 01: ಪ್ರಸಕ್ತ 2025-26 ನೇ ಸಾಲಿನ ಸೂಕ್ಷ್ಮ ನೀರಾವರಿ ಯೋಜನೆಯಡಿ ಕೃಷಿ ಇಲಾಖೆ ವತಿಯಿಂದ ತುಂತುರು ನೀರಾವರಿ ಘಟಕ (ಸ್ಪ್ರಿಂಕ್ಲರ್) ಸೌಲಭ್ಯಕ್ಕೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರು ಈಗಾಗಲೇ ಒಂದು ಹೆಕ್ಟೇರ್ ಪ್ರದೇಶಕ್ಕೆ (ಒಂದು ಎಕರೆ ಮೇಲ್ಪಟ್ಟು 2 ಎಕರೆ 20 ಗುಂಟೆ ಒಳಗೆ) ತುಂತುರು ನೀರಾವರಿ ಘಟಕ ಸವಲತ್ತು ಪಡೆದಿದ್ದಲ್ಲಿ, 2 ಎಕರೆ 20 ಗುಂಟೆಯಿಂದ 5 ಎಕರೆವರೆಗಿನ ಹೆಚ್ಚುವರಿ ವಿಸ್ತೀರ್ಣಕ್ಕೆ ಮತ್ತೊಮ್ಮೆ ಸ್ಪ್ರಿಂಕ್ಲರ್ ಸೌಲಭ್ಯ ಪಡೆಯಬಹುದು. ಅರ್ಹ ರೈತರು ತಮ್ಮ ಆಧಾರ್ ಕಾರ್ಡ, ಖಆ ನಂಬರ್ ಣಠಿಜಚಿಣಜ ಇರುವ ಜಾತಿ ಪ್ರಮಾಣ ಪತ್ರ, ಅ ಖಾತೆ ಉತಾರ, ಆರ್ ಟಿ ಸಿ, ಬೆಳೆ ಹಾಗೂ ನೀರಾವರಿ ಮೂಲದ ದೃಡೀಕರಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ನಕಲು ಪ್ರತಿ ಹಾಗೂ 3 ಪಾಸ್ ಪೋರ್ಟ್ ಸೈಜಿನ ಫೋಟೋದೊಂದಿಗೆ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಬ್ಯಾಡಗಿ/ಕಾಗಿನೆಲೆ ಕಚೇರಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಗಣೇಶ್ ಕಮ್ಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 