ಶಿಕ್ಷಕರ ಕೊರತೆ ನೀಗಿಸಲು ನೇಮಕಾತಿಗೆ ಆದೇಶ- ಸಚಿವ ಮಧು ಬಂಗಾರ​‍್ಪ

ಶಿಕ್ಷಕರ ಕೊರತೆ ನೀಗಿಸಲು ನೇಮಕಾತಿಗೆ ಆದೇಶ- ಸಚಿವ ಮಧು ಬಂಗಾರ​‍್ಪ Appointments ordered to address teacher shortage - Minister Madhu Bangarpa

ಶಿಕ್ಷಕರ ಕೊರತೆ ನೀಗಿಸಲು ನೇಮಕಾತಿಗೆ ಆದೇಶ- ಸಚಿವ ಮಧು ಬಂಗಾರ​‍್ಪ

ರಾಣೆಬೆನ್ನೂರ 16 ; ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 13,500 ಶಿಕ್ಷಕರ ನೇಮಕಾತಿಗೆ ಆದೇಶ ನೀಡಲಾಗಿದೆ. ಆದರೂ 50 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇರುವುದರಿಂದ ಹಂತಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿಗೆ ಕ್ರಮ ವಹಿಸಲಾಗುತ್ತದೆ.  ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದುಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರ​‍್ಪ ಹೇಳಿದರು.  

ರವಿವಾರ ಇಲ್ಲಿನ ಮೃತ್ಯುಂಯನಗರದ ಮೃತ್ಯುಂಜಯ ಸಮುದಾಯ ಭವನದಲ್ಲಿ  ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಏರಿ​‍್ಡಸಿದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ಮತ್ತು ಪ್ರತಿಭಾ ವಿದ್ಯಾರ್ಥಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರಣಾಳಿಕೆಯಲ್ಲಿ ಹೇಳಿದಂತೆ ಕೊಟ್ಟ ಮಾತಿನಂತೆ ಒಪಿಎಸ್ಯನ್ನು ಜಾರಿಗೆ ಮಾಡಲು ನಮ್ಮ ಸರ್ಕಾರ ಸಿದ್ದವಿದೆ. ನಾವು ಮರೆತಿಲ್ಲ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಈಗಗಾಲೇ ಸಂಬಂಧಿಸಿದ ಇಲಾಖೆಗಳ ಜೊತೆಗೆ ಚರ್ಚೆ ನಡೆಸಲಾಗಿದೆ.  

ಉಪಸಭಾಪತಿ ರುದ್ರ​‍್ಪ ಲಮಾಣಿ ಮಾತನಾಡಿ, ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ನೀಡಿದ ಬೇಡಿಕೆಗಳಲ್ಲಿ ನಾನು ಒಬ್ಬ ಫಲಾನುಭವಿಯಾಗಿದ್ದೇನೆ. ನಮ್ಮ ಸಂಸ್ಥೆಗಳ ಅನೇಕ ಹುದ್ದೆಗಳು ಖಾಲಿ ಇವೆ. ಅನೇಕ ವರ್ಷಗಳಿಂದ ಸಮಸ್ಯೆಗಳಿವೆ ಎಂದರು. ಇದೇ ಸಂದರ್ಭದಲ್ಲಿ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ಮತ್ತು ಪ್ರತಿಭಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಅನುದಾನಿತ ಪ್ರೌಢ ಶಾಲಾ ಹಿಂದಿ ಶಿಕ್ಷಕರ ಸಂಘದ ಪದಾಧಿಕಾರಿಗಳು ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು. ರಾಜ್ಯ ಘಟಕದ ಅಧ್ಯಕ್ಷ ಎನ್‌.ರಾಜಗೋಪಾಲ್,  ಉಪನಿರ್ದೇಶಕ ಮೋಹನ ಎನ್‌. ದಂಡಿನ, ಟಯಟ್ ಪ್ರಾಚಾರ್ಯ ಝಡ್‌. ಎಂ. ಖಾಜಿ, ಟಿ. ರವಿಕುಮಾರ, ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶಾಮಸುಂದರ ಅಡಿಗ, ಎನ್‌.ಶ್ರೀಧರ, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ನಲವಾಗಲ, ಮಾಲತೇಶ ಎಂ, ಚಂದ್ರಶೇಖರ ಗ್ಯಾನಗೌಡ್ರ, ಬಸವರಾಜ ನಾಯಕ, ಬಸವರಾಜ ಶ್ಯಾಮನೂರ, ಜ್ಯೋತಿ ಕೆ.ಎಸ್ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಇದ್ದರು.