ಆರಾಧ್ಯ ದೇವ ಶ್ರೀ ಆಂಜನೇಯ್ಯ ಸ್ವಾಮಿ ಮಹಾರಥೋತ್ಸವ
Aradhya Deva Sri Anjaneya Swamy Maharathotsav
ಆರಾಧ್ಯ ದೇವ ಶ್ರೀ ಆಂಜನೇಯ್ಯ ಸ್ವಾಮಿ ಮಹಾರಥೋತ್ಸವ
ಕಂಪ್ಲಿ 31: ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಆರಾಧ್ಯ ದೇವ ಶ್ರೀ ಆಂಜನೇಯ್ಯ ಸ್ವಾಮಿ ಮಹಾರಥೋತ್ಸವ ವಿಜೃಂಭಣೆಯಿಂದ ಭಕ್ತರ ಸಮ್ಮುಖದಲ್ಲಿ ಭಾನುವಾರ ಸಂಜೆ ಜರುಗಿತು. ಇಲ್ಲಿನ ದೇವಸ್ಥಾನದಿಂದ ಹೊರಟ ರಥೋತ್ಸವ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಪುನಃ ದೇವಸ್ಥಾನ ಬಳಿ ಬಂದು ಸಂಪನ್ನಗೊಂಡಿತು. ಭಾಗವಹಿಸಿದ ಭಕ್ತರು ಬಾಳೆಹಣ್ಣು, ಉತ್ತುತ್ತಿ, ಹೂ, ಬಿಲ್ವಪತ್ರಿ ಎಸೆದು, ಭಕ್ತರಿ ಮೆರೆಯುವ ಜತೆಗೆ ಇಷ್ಟಾರ್ಥಗಳು ಲಭಿಸುವಂತೆ ಕೋರಿದರು.ಸುಮಂಗಲಿಯರ ಕಳಸ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾ ಪ್ರಕಾರಗಳು ಮೆರಗು ನೀಡಿದವು. ಬೆಳಿಗ್ಗೆಯಿಂದ ದೇವಸ್ಥಾನದಲ್ಲಿ ಪೂಜಾರಿ ರಮೇಶ ನೇತೃತ್ವದಲ್ಲಿ ಅಭಿಷೇಕ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕೈಂಕಾರ್ಯಗಳು ಶ್ರದ್ದೆಯಿಂದ ಜರುಗಿದವು.ಭಕ್ತರು ಕಾಯಿ, ಕರ್ುರ ಅರ್ಿಸಿ, ಆಂಜನೇಯ್ಯ ಸ್ವಾಮಿ ಕೃಪೆಗೆ ಪಾತ್ರರಾದರು. ಶಾಸಕ ಜೆ.ಎನ್.ಗಣೇಶ ಭಾಗವಹಿಸಿ, ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಆಂಜನೇಯ್ಯಸ್ವಾಮಿ ಆಡಳಿತ ಮಂಡಳಿ ಸದಸ್ಯರು, ಮುಖಂಡರು, ಭಕ್ತರು ಪಾಲ್ಗೊಂಡಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 