ಆರಾಧ್ಯ ದೇವ ಶ್ರೀ ಆಂಜನೇಯ್ಯ ಸ್ವಾಮಿ ಮಹಾರಥೋತ್ಸವ
Aradhya Deva Sri Anjaneya Swamy Maharathotsav
ಆರಾಧ್ಯ ದೇವ ಶ್ರೀ ಆಂಜನೇಯ್ಯ ಸ್ವಾಮಿ ಮಹಾರಥೋತ್ಸವ
ಕಂಪ್ಲಿ 31: ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಆರಾಧ್ಯ ದೇವ ಶ್ರೀ ಆಂಜನೇಯ್ಯ ಸ್ವಾಮಿ ಮಹಾರಥೋತ್ಸವ ವಿಜೃಂಭಣೆಯಿಂದ ಭಕ್ತರ ಸಮ್ಮುಖದಲ್ಲಿ ಭಾನುವಾರ ಸಂಜೆ ಜರುಗಿತು. ಇಲ್ಲಿನ ದೇವಸ್ಥಾನದಿಂದ ಹೊರಟ ರಥೋತ್ಸವ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಪುನಃ ದೇವಸ್ಥಾನ ಬಳಿ ಬಂದು ಸಂಪನ್ನಗೊಂಡಿತು. ಭಾಗವಹಿಸಿದ ಭಕ್ತರು ಬಾಳೆಹಣ್ಣು, ಉತ್ತುತ್ತಿ, ಹೂ, ಬಿಲ್ವಪತ್ರಿ ಎಸೆದು, ಭಕ್ತರಿ ಮೆರೆಯುವ ಜತೆಗೆ ಇಷ್ಟಾರ್ಥಗಳು ಲಭಿಸುವಂತೆ ಕೋರಿದರು.ಸುಮಂಗಲಿಯರ ಕಳಸ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾ ಪ್ರಕಾರಗಳು ಮೆರಗು ನೀಡಿದವು. ಬೆಳಿಗ್ಗೆಯಿಂದ ದೇವಸ್ಥಾನದಲ್ಲಿ ಪೂಜಾರಿ ರಮೇಶ ನೇತೃತ್ವದಲ್ಲಿ ಅಭಿಷೇಕ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕೈಂಕಾರ್ಯಗಳು ಶ್ರದ್ದೆಯಿಂದ ಜರುಗಿದವು.ಭಕ್ತರು ಕಾಯಿ, ಕರ್ುರ ಅರ್ಿಸಿ, ಆಂಜನೇಯ್ಯ ಸ್ವಾಮಿ ಕೃಪೆಗೆ ಪಾತ್ರರಾದರು. ಶಾಸಕ ಜೆ.ಎನ್.ಗಣೇಶ ಭಾಗವಹಿಸಿ, ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಆಂಜನೇಯ್ಯಸ್ವಾಮಿ ಆಡಳಿತ ಮಂಡಳಿ ಸದಸ್ಯರು, ಮುಖಂಡರು, ಭಕ್ತರು ಪಾಲ್ಗೊಂಡಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 