ಕಲಾ ಕೌಶಲ್ಯ ಪ್ರಶಸ್ತಿ: ನೇತ್ರಾಗೆ ಸನ್ಮಾನ
ಬೈಲಹೊಂಗಲ,15: ಶಿಕ್ಷಕರು ವಿದ್ಯಾಥರ್ಿಗಳ ಸರ್ವತೋಮುಖ ಅಭಿವೃದ್ಧಿಗೆ ಪ್ರಯತ್ನ ಪಟ್ಟರೆ ವಿದ್ಯಾಥರ್ಿಗಳ ಭವಿಷ್ಯ ಉಜ್ವಲವಾಗಲು ಸಾಧ್ಯ ಎಂದು ಶಾಸಕ ಮಹಾಂತೇಶ ದೊಡಗೌಡರ ಹೇಳಿದರು.
ತಾಲೂಕಿನ ಮುರಕೀಬಾಂವಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಎಸ್ಡಿಎಂಸಿ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, ಶಾಲಾ ಉಸ್ತುವಾರಿ ಸಮಿತಿ, ಶಿಕ್ಷಕರು ಸಹಕಾರದಿಂದ ಕೂಡಿಕೊಂಡು ಪ್ರತಿ ಮಕ್ಕಳ ಏಳ್ಗೆಗಾಗಿ ಶ್ರಮಿಸಬೇಕು. ಇದರಿಂದ ಶಾಲೆಯ ಕೀತರ್ಿ ಹೆಚ್ಚಿಸಲು ಶಿಕ್ಷಣ ಗುಣಮಟ್ಟ ಹೆಚ್ಚಲು ಸಾಧ್ಯವೆಂದರು.
ಮಂಡ್ಯದಲ್ಲಿ ಪ್ರಗತಿಪರ ಸೇವಾ ಸಂಸ್ಥೆಯಿಂದ ನಡೆದ 16 ನೇ ರಾಜ್ಯಮಟ್ಟದ ಚಿತ್ರಕಲಾ ಸ್ಪಧರ್ೆಯಲ್ಲಿ ಭಾಗವಹಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿ ಕಲಾ ಕೌಶಲ್ಯ ಪ್ರಶಸ್ತಿ ಪಡೆದಿರುವ ವಿದ್ಯಾಥರ್ಿನಿ ನೇತ್ರಾ ಉಡಕೇರಿ ಇವರನ್ನು ಶಾಸಕರು ಸತ್ಕರಿಸಿದರು.
ಗ್ರಾ.ಪಂ ಅಧ್ಯಕ್ಷೆ ನಿರ್ಮಲಾ ಸಾವಳಗಿ, ಸದಸ್ಯೆ ನಾಗಮ್ಮಾ ಪಾಟೀಲ, ಬಿ.ಎಫ್.ಕೊಳದೂರ, ಶಿವಾನಂದ ಪಾಟೀಲ, ಎಸ್ಡಿಎಂಸಿ ಉಪಾಧ್ಯಕ್ಷೆ ಸಾವಕ್ಕಾ ವಕ್ಕುಂದ, ಸದಸ್ಯರಾದ ಸುರೇಶ ಉಡಕೇರಿ, ರಾಯನಗೌಡ ಪಾಟೀಲ, ರಾಯನಾಯ್ಕ ನಾಯ್ಕರ, ಶಿಕ್ಷಕರು, ವಿದ್ಯಾಥರ್ಿಗಳು ಪಾಲ್ಗೊಂಡಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 