ಕಂಪ್ಲಿ-ಕುರುಗೋಡು ಉತ್ಸವ ಅಂಗವಾಗಿ ಪೂರ್ವಭಾವಿ ಸಭೆ ನಡೆಸಿ ಜಿಲ್ಲಾಧಿಕಾರಿ ಉತ್ಸವಗಳ ಯಶಸ್ವಿಗೆ ಎಲ್ಲಾ ಅಧಿಕಾರಿಗಳು ಒಗ್ಗೂಡಿ ಕೆಲಸ ನಿರ್ವಹಿಸಿ
As part of the Kampli-Kurugod festival, a preliminary meeting was held and all officers worked toge
ಬಳ್ಳಾರಿ 06: ಜಿಲ್ಲೆಯಲ್ಲಿ ಕಂಪ್ಲಿ ಮತ್ತು ಕುರುಗೋಡು ಉತ್ಸವಗಳನ್ನು ಆಯೋಜಿಸಲಾಗಿದ್ದು, ಎಲ್ಲಾ ಅಧಿಕಾರಿಗಳು ಒಗ್ಗೂಡಿ ಕೆಲಸ ಮಾಡುವ ಮೂಲಕ ಉತ್ಸವಗಳನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು.
ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಕಂಪ್ಲಿ ಮತ್ತು ಕುರುಗೋಡು ಉತ್ಸವ ಅಂಗವಾಗಿ ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸಲು ಶುಕ್ರವಾರ ಏರಿ್ಡಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ್ ಅವರ ಇಚ್ಛಾಶಕ್ತಿಯಂತೆ ಫೆ.11, 12 ರಂದು ಕಂಪ್ಲಿ ಉತ್ಸವ ಮತ್ತು ಫೆ.15, 16 ರಂದು ಕುರುಗೋಡು ಉತ್ಸವ ಆಯೋಜಿಸಲು ನಿರ್ಧರಿಸಲಾಗಿದ್ದು, ಈಗಾಗಲೇ ಸಿದ್ಧತಾ ಕಾರ್ಯ ಆರಂಭಗೊಂಡಿದೆ. ಹಾಗಾಗಿ ಅಧಿಕಾರಿಗಳು ತಮಗೆ ವಹಿಸಿದ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.
ಕಂಪ್ಲಿ ಉತ್ಸವದ ಅಂಗವಾಗಿ ಫೆ.11 ರಂದು ಸಂಜೆ ಕಂಪ್ಲಿ ಕೋಟೆ ಪಂಪಾಪತಿ ದೇವಸ್ಥಾನದಿಂದ ವಿವಿಧ ಸಾಂಸ್ಕೃತಿಕ ಕಲಾತಂಡಗಳ ಭವ್ಯ ಮೆರವಣಿಗೆ ನಡೆಯಲಿದ್ದು, ಸೋಮಪ್ಪ ಕೆರೆ ಆವರಣ ತಲುಪಿದ ಬಳಿಕ ವಾರಣಾಸಿ ಅರ್ಚಕರಿಂದ ‘ತುಂಗಾರತಿ’ ನಡೆಯಲಿದೆ. ಬಳಿಕ ಪಟ್ಟಣದ ಸುಂದರಿ ಸಕ್ಕರೆ ಕಾರ್ಖಾನೆಯ ಮೈದಾನದಲ್ಲಿ ಅಂದು ಸಂಜೆ ಸ್ಥಳೀಯ ಕಲಾವಿದರಿಂದ ಸಂಗೀತ ಗಾಯನ, ಬಯಲಾಟ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಬೇಕಾದ ಎಲ್ಲಾ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಫೆ.12 ರಂದು ಸಂಜೆ ‘ಕಂಪ್ಲಿ ಉತ್ಸವ’ದ ಉದ್ಘಾಟನಾ ಕಾರ್ಯಕ್ರಮ ಜರುಗಲಿದೆ. ಬಳಿಕ ಖ್ಯಾತ ಗಾಯಕ ಚಂದನ್ ಶೆಟ್ಟಿ ತಂಡದಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ಕಲಾವಿದರಿಗೆ ತಂಗಲು ವ್ಯವಸ್ಥೆ ಮಾಡಬೇಕು. ವೇದಿಕೆ ನಿರ್ಮಾಣ, ಸ್ವಚ್ಛತಾ ಕಾರ್ಯ, ಬೆಳಕು ವ್ಯವಸ್ಥೆ, ಕಲಾವಿದರ ಆಯ್ಕೆ ಪ್ರಕ್ರಿಯೆ ಸೇರಿದಂತೆ ಎಲ್ಲಾ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.
ಸೂಕ್ತ ಪಾಕಿಂರ್ಗ್ ವ್ಯವಸ್ಥೆ, ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಬೇಕು. ಹೆಚ್ಚುವರಿ ಸಾರಿಗೆ ವ್ಯವಸ್ಥೆ, ಆಗ್ನಿಶಾಮಕ, ಅಂಬುಲೆನ್ಸ್ ವ್ಯವಸ್ಥೆ ಇರಿಸಿಕೊಳ್ಳಬೇಕು ಎಂದು ಸೂಚಿಸಿದರು.
ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಬೇಕು. ಎರಡು ದಿನಗಳ ಉತ್ಸವದಲ್ಲಿ ಚಿತ್ರಕಲಾ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಮೆಹೆಂದಿ ಸ್ಪರ್ಧೆ, ಅಡುಗೆ ಸ್ಪರ್ಧೆ, ಆಹಾರ ಮೇಳ, ಫಲಪುಷ್ಪ ಪ್ರದರ್ಶನ, ಸಿಂಗರಿಸಿದ ಎತ್ತಿನಗಾಡಿಗಳ ಜಾಥಾ, ಗ್ರಾಮೀಣ ಕ್ರೀಡೆಗಳು ಹಾಗೂ ವಿವಿಧ ಇಲಾಖೆಗಳ ಮಾಹಿತಿ ಒಳಗೊಂಡ ಮಳಿಗೆಗಳು ಇರಲಿದ್ದು, ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು.
ಶಿಷ್ಟಾಚಾರದನ್ವಯ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ಉತ್ಸವಗಳು ಜನೋತ್ಸವವಾಗಲು, ಸಾರ್ವಜನಿಕರು ಸಹ ಭಾಗವಹಿಸಿ ಯಶಸ್ವಿಯಾಗಿಸಲು ಸಾಕಷ್ಟು ಪ್ರಚಾರ ಕೈಗೊಳ್ಳಬೇಕು ಎಂದು ತಿಳಿಸಿದರು.
*ಫೆ.15 ಮತ್ತು 16 ರಂದು ಕುರುಗೋಡು ಉತ್ಸವ:*
ಅದೇ ರೀತಿಯಾಗಿ ಫೆ.15, 16 ರಂದು ಕುರುಗೋಡು ಉತ್ಸವವನ್ನು ಸಹ ಆಯೋಜಿಸಲಾಗಿದೆ. ಫೆ.15 ರಂದು ಸಂಜೆ ಜಾನಪದ ಕಲಾತಂಡಗಳಿಂದ ಭವ್ಯ ಮೆರವಣಿಗೆ, ಬಳಿಕ ತುಂಗಾರತಿ ನಡೆಯಲಿದೆ. ಫೆ.16 ರಂದು ಉತ್ಸವದ ಉದ್ಘಾಟನೆ ನೆರವೇರಲಿದೆ. ಅಧಿಕಾರಿಗಳಿಗೆ ಈಗಾಗಲೇ ತಮಗೆ ವಹಿಸಿದ ಕೆಲಸಗಳನ್ನು ಯಥಾವತ್ತಾಗಿ ಇಲ್ಲಿಯೂ ಸಹ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಕಂಪ್ಲಿ ತಹಶೀಲ್ದಾರ ಜೂಗಲ ಮಂಜುನಾಯಕ, ಕುರುಗೋಡು ತಹಶೀಲ್ದಾರ ನರಸಪ್ಪ, ತೋರಣಗಲ್ಲು ಡಿವೈಎಸ್ಪಿ ಪ್ರಸಾದ್ ಗೋಖಲೆ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಪುರಸಭೆ ಅಧಿಕಾರಿಗಳು, ತಾಪಂ ಇಒಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 