ಜಾಗೃತಿ ಸಮಿತಿ ಸದಸ್ಯರಾಗಿ ಅಶೋಕ ಮಲ್ಲಪ್ಪ ನಾಯ್ಕೋಡಿ ಆಯ್ಕೆ

ಜಾಗೃತಿ ಸಮಿತಿ ಸದಸ್ಯರಾಗಿ ಅಶೋಕ ಮಲ್ಲಪ್ಪ ನಾಯ್ಕೋಡಿ ಆಯ್ಕೆ Ashok Mallappa Naikodi elected as member of awareness committee

ವಿಜಯಪುರ 08: ಆಹಾರ ನಾಗರಿಕ ಸರಬರಾಜು ಗ್ರಾಹಕ ವ್ಯವಹಾರಗಳ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸದಸ್ಯರಾಗಿ ವಿಜಯಪುರ ತಾಲೂಕಿನ ಅಶೋಕ ಮಲ್ಲಪ್ಪ ನಾಯ್ಕೋಡಿ ನೇಮಕರಾಗಿದ್ದಾರೆ. 

ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಿ ಆದೇಶಿಸಿದೆ. ಇಲಾಖೆ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯದ ಎಲ್ಲಾ ಜಿಲ್ಲಾ ಮಟ್ಟದ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನು ಆಯ್ಕೆ ಮಾಡಿದ್ದ ಅವಧಿಯಿಂದ ಸುಮಾರು ಎರಡು ವರ್ಷಗಳ ಕಾಲ ನಾಮನಿರ್ದೇಶನ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ನೂತನ ಸದಸ್ಯರಿಗೆ ಜಿಲ್ಲಾ ತಾಲೂಕು ಮಟ್ಟದ ಮುಖಂಡರು ಅಭಿನಂದಿಸಿದ್ದಾರೆ.