ಡಾಂಬರೀಕರಣ, ಅಂಗನವಾಡಿ ಉದ್ಘಾಟಿಸಿದ: ಶಾಸಕ ಐಹೊಳೆ
Asphalting, Anganwadi inaugurated: MLA Aihole
ರಾಯಬಾಗ, 11 : ರಸ್ತೆಗಳ ಸುಧಾರಣೆಯಿಂದ ಸಾರಿಗೆ ಸಂಚಾರ ಸುಗಮವಾಗುವುದರಿಂದ ಆರ್ಥಿಕ ಪ್ರಗತಿಗೆ ಸಹಕಾರಿಯಾಗಲಿದೆ ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು. ಮಂಗಳವಾರ ಪಟ್ಟಣದ ಹನುಮಾನ ಮಂದಿರದಿಂದ ಸಾಯಿನಗರದ (ರಾಯಬಾಗ-ಜಲಾಲಪೂರ ರಸ್ತೆ) ವರೆಗೆ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 1 ಕೋಟಿ ರೂ. ಅನುದಾನದಲ್ಲಿ ರಸ್ತೆ ಮರು ಡಾಂಬರೀಕರಣ ಕಾಮಗಾರಿ ಹಾಗೂ ಜಿ.ಪಂ. ಅನುದಾನದಲ್ಲಿ ತಾಲೂಕಿನ ಬಾವನ ಸೌಂದತ್ತಿ ಮತ್ತು ಸೌಂದತ್ತಿವಾಡಿಗಳಲ್ಲಿ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕೇಂದ್ರಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಗುವಿನ ಕಲಿಕೆಗೆ ಮೊದಲ ಹೆಜ್ಜೆಯಾದ ಅಂಗನವಾಡಿ ಕೇಂದ್ರಗಳನ್ನು ಸುಂದರವಾಗಿ ನಿರ್ಮಿಸಲಾಗಿದೆ. ಇಲ್ಲಿನ ಸಿಬ್ಬಂದಿ ಮಗುವಿನ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸಬೇಕೆಂದು ತಿಳಿಸಿದರು.ಪಿಡಬ್ಲ್ಯುಡಿ ಎಇಇ ಆರಿ್ಬ.ಮನುವಡ್ಡರ, ಸಿಡಿಪಿಒ ಭಾರತಿ ಕಾಂಬಳೆ, ಸದಾಶಿವ ಘೋರೆ್ಡ, ಪ.ಪಂ ಅಧ್ಯಕ್ಷ ಅಶೋಕ ಅಂಗಡಿ, ಬಾವನ ಸೌಂದತ್ತಿ ಗ್ರಾ.ಪಂ.ಅಧ್ಯಕ್ಷ ರಾಮಚಂದ್ರ ಕಾಟೆ, ಉಪಾಧ್ಯಕ್ಷ ಆಜಾದ ತಾಸಿವಾಲೆ, ಪಿಡಿಒ ಎಸ್.ಎಸ್.ನ್ಯಾಮಗೌಡರ, ತಾತ್ಯಾಸಾಬ ಕಾಟೆ, ಶಾಂತಿನಾಥ ಪಾಟೀಲ, ಅನೀಲ ಹಂಜೆ, ಸತ್ಯಪ್ಪ ಬಿಷ್ಠೆ, ದತ್ತಾ ಜಾಧವ್, ಸುರೇಶ ಮಾಳಿ, ಮಹೇಶ ಕರಮಡಿ, ಅಜೀತ ಖೆಮಲಾಪೂರೆ, ರಂಜಾನ ಮಕಾನದಾರ, ಗೋಪಾಲ ಕೊಚೆರಿ, ಮಾರುತಿ ಬಂತೆ, ಮಜ್ಜಿದ್ ಡಾಂಗೆ, ಜಿಯಾವುಲ್ಲಾ ಮುಲ್ಲಾ, ಯುನಸ್ ಮುಲ್ಲಾ, ಮಹೇಶ ಕುಲಗೂಡೆ, ಭಾರತಿ ಲೋಹಾರ, ಸನ್ಮತಿ ಶೆಟ್ಟಿ, ರಾಕೇಶ ಅವಳೆ, ಸುಭಾಷ ಕಾಂಬಳೆ, ಶ್ರೀಧರ ಮೇಗಲಮನಿ ಸೇರಿ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 