ನೆರೆ ಸಂತ್ರಸ್ಥರಿಗೆ ಸೌಲಭ್ಯದ ಭರವಸೆ
ಗದಗ 07: ಮಲಪ್ರಭಾ ನದಿ ಹಾಗೂ ಬೆಣ್ಣಿಹಳ್ಳ ಪ್ರವಾಹದಿಂದ ಹಾನಿಗೊಳಗಾಗುವ ಗ್ರಾಮಗಳ ಜನ ಜಾನುವಾರುಗಳ ಸುರಕ್ಷತೆಗಾಗಿ ಜಿಲ್ಲಾಡಳಿತವು ಸಧ್ಯ ಕೊಣ್ಣೂರಿನಲ್ಲಿ ತೆರಯಲಾಗಿರುವ ಪರಿಹಾರ ಕೇಂದ್ರ ಒಂದಕ್ಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹಾಗೂ ನರಗುಂದ ಶಾಸಕ ಸಿ.ಸಿ.ಪಾಟೀಲ ಭೇಟಿ ನೀಡಿ ಮಹಿಳೆಯರಿಗೆ ಹಾಗೂ ನೆರೆ ಸಂತ್ರಸ್ಥರಿಗೆ ಧೈರ್ಯ ಹೇಳಿದರು. ಪರಿಹಾರ ಕೇಂದ್ರಗಳಲ್ಲಿ ಯಾವುದೇ ರೀತಿ ಲೋಪವಾಗದಂತೆ ಸಂತ್ರಸ್ಥರಿಗೆ ಊಟ, ವಸತಿ, ವೈದ್ಯಕೀಯ ಸೌಲಭ್ಯ ಹಾಗೂ ಜಾನುವಾರುಗಳಿಗೆ ಯಾವುದೇ ಸಮಸ್ಯೆಯಾಗದಂತೆ ನಿಗಾವಹಿಸಲು ಜಿಲ್ಲಾಧಿಕಾರಿಗಳು ಹಾಗೂ ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ, ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ಉಪವಿಭಾಗಾಧಿಕಾರಿ ಪಿ.ಎಸ್.ಮಂಜುನಾಥ, ನರಗುಂದ ತಹಶೀಲ್ದಾರ ಕೋರಿಶೆಟ್ಟರ, ತಾ,ಪಂ. ಕಾರ್ಯನಿರ್ವಾಹಕ ಅಧಿಕಾರಿ ಕನಕರೆಡ್ಡಿ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಪರಿಹಾರ ಕೇಂದ್ರಗಳ ವಿವರ: ರೋಣ ತಾಲೂಕಿನ ಕುರುವಿನಕೊಪ್ಪ, ಮೆಣಸಗಿ, ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಎ.ಪಿ.ಎಮ್.ಸಿ ಕಟ್ಟಡ, ಕೆ.ಇ.ಎಸ್. ಪ್ರೌಢಶಾಲೆ ಹಾಗೂ ಬೂದಿಹಾಳ, ವಾಸನ ಗ್ರಾಮಗಳಲ್ಲಿ ಸಂತ್ರಸ್ಥರಿಗೆ ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 