ವಿದ್ಯಾರ್ಥಿಗಳ ಹಾಗೂ ಪೋಷಕರ ಗಮನಕ್ಕೆ
Attention students and parents
ವಿದ್ಯಾರ್ಥಿಗಳ ಹಾಗೂ ಪೋಷಕರ ಗಮನಕ್ಕೆ
ಗದಗ 17: ಗದಗ ಜಿಲ್ಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದ ಜಾತಿ/ ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂಬವಾಗುತ್ತಿದ್ದು, ವಿದ್ಯಾರ್ಥಿಗಳ ಹಾಗೂ ಅಭ್ಯರ್ಥಿಗಳ ಅನುಕೂಲಕ್ಕಾಗಿ ಸಹಾಯಕ ಆಯುಕ್ತರ ಕಾರ್ಯಾಲಯದಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ. ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿಗಾಗಿ ತ್ವರಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅವಶ್ಯಕತೆಯಿರುವ ವಿದ್ಯಾರ್ಥಿಗಳು/ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 08372-238042 ನ್ನು ಸಂಪರ್ಕಿಸಬಹುದಾಗಿದೆ. ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮ ವಹಿಸಲಾಗುವುದು. ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡುವ ಅಗತ್ಯವಿಲ್ಲವೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 