ಅವಸರ್ ಫೌಂಡೇಶನ್-ಕೃಷಿ ವಿವಿ ಹಿರಿಯ ಪ್ರಾಥಮಿಕ ಶಾಲೆ ಒಪ್ಪಂದ
Avasar Foundation-Krishi Vv Senior Primary School Agreement
ಧಾರವಾಡ 07: ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೃಷಿನಗರ ಹಿರಿಯ ಪ್ರಾಥಮಿಕ ಶಾಲೆಯೊಂದಿಗೆ ಬೆಂಗಳೂರಿನ ಅವಸರ್ ಪ್ರತಿಷ್ಠಾನವು ಶಾಲೆಯ ನವೀಕರಣದ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ಕೃಷಿನಗರ ಶಾಲೆಯ ಆವರಣದಲ್ಲಿ ಆಯೋಜಿಸಿದ ಸಮಾರಂಭದಲ್ಲಿ ಎರಡೂ ಸಂಸ್ಥೆಗಳ ಪ್ರತಿನಿಧಿಗಳು ಒಪ್ಪಂದಕ್ಕೆ ಸಹಿ ಮಾಡಿದರು. ಕೃಷಿ ವಿಶ್ವವಿದ್ಯಾಲಯ, ಧಾರವಾಡದ ಕುಲಸಚಿವ ಜಯಶ್ರೀ ಶಿಂತ್ರಿ, ಕಾರ್ಯದರ್ಶಿ ಡಾ. ಹೆಚ್.ಬಿ. ಬಬಲಾದ, ಬೆಂಗಳೂರಿನ ಅವಸರ್ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿಗಳಾದ ಆನಂದ್ ಚತುರ್ವೇದಿ ಒಪ್ಪಂದ ಪತ್ರಗಳನ್ನು ವಿನಿಮಯ ಮಾಡಿಕೊಂಡರು.
ಪ್ರಸ್ತುತ ಶಾಲೆಗೆ ಕಟ್ಟಡ ದುರಸ್ತಿ ಹಾಗೂ ಬಣ್ಣ ಹಚ್ಚುವ ಕಾರ್ಯ, ಅಧ್ಯಯನ ಸಾಮಾಗ್ರಿಗಳ ಪೂರೈಕೆ, ವಿದ್ಯುತ್ ಉಪಕರಣಗಳ ಜೋಡಣೆ, ಇನ್ನಿತರ ಅಂಶಗಳನ್ನು ಈ ಒಪ್ಪಂದವು ಹೊಂದಿದೆ. ಶಾಲೆಯ ನಿರ್ವಹಣಾ ಸಮಿತಿಯ ಖಜಾಂಚಿ ಡಾ. ಬಿ. ಎನ್. ಅರವಿಂದಕುಮಾರ್, ಸದಸ್ಯರುಗಳಾದ ಡಾ.ಎಸ್.ಎಂ. ಮುಂದಿನಮನಿ, ಡಾ. ಆರ್. ವಿ. ಕೋಟಿ, ಡಾ. ಎಸ್. ಕೆ. ಪಾಟೀಲ ಮತ್ತು ಮುಖ್ಯ ಶಿಕ್ಷಕಿ ಇಂದಿರಾ ತುಪಸುಂದರ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 